ಬೆಂಗಳೂರು: ಕೊರೋನಾ ಹಿನ್ನೆಲೆಯಲ್ಲಿ ಮೊಹರಂ, ಗಣೇಶ ಚತುರ್ಥಿ ಮೊದಲಾದ ಹಬ್ಬಗಳ ಆಚರಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮಾರ್ಗಸೂಚಿಯೊಂದನ್ನು ಹೊರಡಿಸಿದೆ.
ಆಗಸ್ಟ್, ಸೆಪ್ಟೆಂಬರ್ ತಿಂಗಳಲ್ಲಿ ಸಾಲು ಸಾಲು ಹಬ್ಬಗಳು ಬರಲಿವೆ. ಕೊರೋನಾ ಹಿನ್ನೆಲೆಯಲ್ಲಿ ಈ ಹಬ್ಬಗಳ ಆಚರಣೆಗೆ ಸಂಬಂಧಿಸಿದಂತೆ ಮಾರ್ಗಸೂಚಿ ಹೊರಡಿಸಲಾಗಿದೆ. ಸಾರ್ವಜನಿಕ ಪ್ರದೇಶಗಳಲ್ಲಿ ಮೆರವಣಿಗೆ ಮಾಡದಂತೆಯೂ ಸರ್ಕಾರ ನಿರ್ಬಂಧ ಹೇರಿದೆ.
ಗಣೇಶ ಚತುರ್ಥಿ ಆಚರಣೆ ಮಾಡುವ ದೇವಾಲಯಗಳಲ್ಲಿ ನಿತ್ಯ ಸ್ಯಾನಿಟೈಸೇಶನ್ ಮಾಡುವಂತೆ ಸೂಚಿಸಲಾಗಿದೆ. ಹಾಗೆಯೇ ಈ ಆಚರಣೆಗಳಲ್ಲಿ ಪಾಲ್ಗೊಳ್ಳುವ ಜನರು ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ದೈಹಿಕ ಅಂತರ ಕಾಪಾಡಿಕೊಳ್ಳುವಂತೆಯೂ ಸೂಚಿಸಲಾಗಿದೆ. ಹಾಗೆಯೇ ಸಾರ್ವಜನಿಕ ಪ್ರದೇಶದಲ್ಲಿ ಪೆಂಡಾಲ್ ಹಾಕುವುದು, ಚಪ್ಪರ ಹಾಕುವುದು, ಶಾಮಿಯಾನದ ವೇದಿಕೆಗಳನ್ನು ನಿರ್ಮಾಣ ಮಾಡುವಂತಿಲ್ಲ ಎಂಬುದಾಗಿಯೂ ಸರ್ಕಾರ ತನ್ನ ಮಾರ್ಗಸೂಚಿಯಲ್ಲಿ ತಿಳಿಸಿದೆ.
ಮೊಹರಂ ಆಚರಣೆಯಲ್ಲಿ ಪ್ರಾರ್ಥನಾ ಸಭೆ, ಮೆರವಣಿಗೆ ನಡೆಸುವಂತಿಲ್ಲ. ಕನಿಷ್ಠ ಸಂಖ್ಯೆಯಲ್ಲಿ ಜನರು, ಸೂಕ್ತ ದೈಹಿಕ ಅಂತರ ಕಾಪಾಡಿಕೊಳ್ಳುವ ಮೂಲಕ ಮೊಹರಂ ಆಚರಿಸುವಂತೆ ಸೂಚಿಸಲಾಗಿದೆ. 10 ವರ್ಷದೊಳಗಿನ ಮಕ್ಕಳು, 60 ವರ್ಷ ಮೇಲ್ಪಟ್ಟ ವೃದ್ಧರು ಮನೆಯಲ್ಲೀಯೇ ಪ್ರಾರ್ಥನೆ ಸಲ್ಲಿಸಬೇಕು ಎಂದು ಮಾರ್ಗಸೂಚಿ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.