ನವದೆಹಲಿ: ಯಾವುದೇ ರೀತಿಯ ಭದ್ರತಾ ಸವಾಲುಗಳನ್ನು ಎದುರಿಸಲು ದೇಶದ ಸಶಸ್ತ್ರ ಪಡೆಗಳು ಸನ್ನದ್ಧವಾಗಿರುವುದಾಗಿ ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ತಿಳಿಸಿದ್ದಾರೆ.
ದೇಶದ ಸ್ವಾತಂತ್ರ್ಯ ದಿನದ 75 ನೇ ವರ್ಷಾಚರಣೆ ಅಂಗವಾಗಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಸೇನೆಯ ಮೂರೂ ಪಡೆಗಳ ನಡುವೆ ಪರಸ್ಪರ ಸಹಕಾರ ಮನೋಭಾವ ಹೆಚ್ಚಳಕ್ಕೆ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಇವುಗಳು ಸಶಸ್ತ್ರ ಪಡೆಗಳ ಸಾಮರ್ಥ್ಯವನ್ನು ಹೆಚ್ಚಳ ಮಾಡಲಿದೆ ಎಂದು ತಿಳಿಸಿದ್ದಾರೆ.
ಇದೇ ಸಂದರ್ಭದಲ್ಲಿ ದೇಶದ ಸಶಸ್ತ್ರ ಪಡೆಗಳ ಆಧುನೀಕರಣ, ಅವುಗಳಿಗೆ ಬಲ ತುಂಬುವ ನಿಟ್ಟಿನಲ್ಲಿ ಪ್ರಧಾನಿ ಮೋದಿ ಅವರು ಕೈಗೊಂಡ ಮಹತ್ವದ ನಿರ್ಣಯಗಳ ಬಗೆಗೂ ಅವರು ಸ್ಮರಿಸಿದರು. ಪಡೆಗಳ ಬಲವರ್ಧನೆಯ ದೃಷ್ಟಿಯಿಂದ ಮತ್ತಷ್ಟು ಕ್ರಮಗಳನ್ನು ಕೈಗೊಳ್ಳಬೇಕಾದ ಅಗತ್ಯ ಇರುವುದಾಗಿ ಅವರು ಹೇಳಿದರು. ಭಾರತ ಶಾಂತಿಪ್ರಿಯ ರಾಷ್ಟ್ರ. ಆದರೂ ತನ್ನ ಮುಂದಿರುವ ಸವಾಲುಗಳನ್ನು ಸಶಕ್ತವಾಗಿ ಎದುರಿಸುವ ನಿಟ್ಟಿನಲ್ಲಿ, ಯುದ್ಧ ಸನ್ನದ್ಧತೆಗೆ ಪೂರಕವಾಗಿ ಮತ್ತಷ್ಟು ತರಬೇತಿ ನೀಡುವ ಅಗತ್ಯ ಇದೆ ಎಂದು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.