ನವದೆಹಲಿ: ಆಗಸ್ಟ್ 14 ದೇಶದ ವಿಭಜನಾ ದಿನವಾಗಿದ್ದು, ಅಖಂಡ ಭಾರತ ವಿಭಜನೆಯಾದ ಕರಾಳ ನೆನಪಿನ ಹಿನ್ನೆಲೆಯಲ್ಲಿ ಈ ದಿನವನ್ನು ನೆನಪಿಸಿಕೊಳ್ಳಲಾಗುತ್ತದೆ.
ಈ ಸಂಬಂಧ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ದೇಶ ವಿಭಜನೆಯ ಕರಾಳ ದಿನದ ನೆನಪುಗಳನ್ನು ನಾವು ಮರೆಯುವಂತಿಲ್ಲ. ಸಾಮಾಜಿಕ ವಿಭಜನೆ, ಸಾಮರಸ್ಯ ವಿರೋಧಿ ವಿಷವನ್ನು ಕಿತ್ತೊಗೆಯುವ, ಏಕತೆ, ಸಾಮಾಜಿಕ ಸಾಮರಸ್ಯ, ಮಾನವ ಚೈತನ್ಯವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ನಾವು ಈ ದಿನವನ್ನು ನೆನಪಿಸಿಕೊಳ್ಳೋಣ ಎಂದು ತಿಳಿಸಿದ್ದಾರೆ.
ಹಾಗೆಯೇ, ಈ ವಿಭಜನೆಯ ನೋವನ್ನು ನಾವು ಎಂದಿಗೂ ಮರೆಯುವುದು ಸಾಧ್ಯವಿಲ್ಲ. ಬುದ್ಧಿಹೀನ ಹಿಂಸೆ, ದ್ವೇಷಗಳಿಂದ ನಮ್ಮ ಲಕ್ಷಾಂತರ ಸಹೋದರ, ಸಹೋದರಿಯರು ಸ್ಥಳಾಂತರ ಹೊಂದಬೇಕಾಯಿತು. ಅನೇಕ ಜನರು ತಮ್ಮ ಜೀವ ಕಳೆದುಕೊಳ್ಳುವಂತಾಯಿತು. ನಮ್ಮ ಜನರ ಹೋರಾಟ ಮತ್ತು ತ್ಯಾಗಗಳ ನೆನಪಿಗಾಗಿ ಆಗಸ್ಟ್ 14 ನ್ನು ವಿಭಜನೆಯ ದಿನವನ್ನಾಗಿ ನೆನಪಿಸಿಕೊಳ್ಳಲಾಗುತ್ತಿದೆ ಎಂದು ಮೋದಿ ಹೇಳಿದ್ದಾರೆ.
May the #PartitionHorrorsRemembranceDay keep reminding us of the need to remove the poison of social divisions, disharmony and further strengthen the spirit of oneness, social harmony and human empowerment.
— Narendra Modi (@narendramodi) August 14, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.