ನವದೆಹಲಿ: ಭಾರತದ ಸ್ವಾತಂತ್ರ್ಯ ದಿನದ ಅಮೃತ ಮಹೋತ್ಸವದ ಈ ದಿನದಂದು ಪ್ರಧಾನಿ ಮೋದಿ ಅವರು ನವದೆಹಲಿಯ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದರು.
ಬಳಿಕ ಮಾತನಾಡಿದ ಅವರು, ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ದೇಶಕ್ಕಾಗಿ ಮತ್ತು ಜನ ಸಾಮಾನ್ಯರಿಗಾಗಿ ದುಡಿದ ಆರೋಗ್ಯ ಕಾರ್ಯಕರ್ತರಿಗೆ ಅವರು ಅಭಿನಂದನೆಗಳನ್ನು ಸಮರ್ಪಿಸಿದರು. ಹಾಗೆಯೇ ದೇಶದಲ್ಲಿ ನಡೆಯುತ್ತಿರುವ ದೊಡ್ಡ ಮಟ್ಟದ ಲಸಿಕಾ ಅಭಿಯಾನ ಮತ್ತು ಒಲಿಂಪಿಕ್ಸ್ಗೆ ತೆರಳಿ ದೇಶದ ಕೀರ್ತಿಯನ್ನು ಹೆಚ್ಚಿಸಿದ ಕ್ರೀಡಾಪಟುಗಳ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಹಾಗೆಯೇ ಮುಂದಿನ 25 ವರ್ಷಗಳಲ್ಲಿ ಹೊಸ ಭಾರತದ ನಿರ್ಮಾಣದ ಸದಾಶಯದ ಜೊತೆಗೆ ಹೆಜ್ಜೆ ಹಾಕೋಣ ಎಂದು ಅವರು ಹೇಳಿದರು. ಹಾಗೆಯೇ ಕೊರೋನಾ ಸಾಂಕ್ರಾಮಿಕ ಸೋಂಕು ತಡೆಯುವ ನಿಟ್ಟಿನಲ್ಲಿ ಭಾರತ ಆರಂಭಿಸಿದ ಲಸಿಕಾ ಅಭಿಯಾನದಲ್ಲಿ ಈ ವರೆಗೆ 54 ಕೋಟಿ ಜನರಿಗೆ ಲಸಿಕೆ ನೀಡಲಾಗಿದೆ. ವಿಶ್ವದ ಅತೀ ದೊಡ್ಡ ಲಸಿಕಾ ಅಭಿಯಾನ ನಡೆಸಿದ ಕೀರ್ತಿ ಭಾರತದ್ದು ಎಂದು ಅವರು ಹೇಳಿದರು.
ಹಾಗೆಯೇ ಪ್ರಸ್ತುತ ಸರ್ಕಾರದ ಯೋಜನೆಗಳ ವೇಗ ಹೆಚ್ಚಾಗಿದ್ದು, ಎಲ್ಲಾ ಯೋಜನೆಗಳು ಸುಲಭವಾಗಿ ಜನಸಾಮಾನ್ಯರ ಬಳಿಗೆ ತಲುಪುವಂತಾಗಿದೆ. ಪಿಂಚಣಿ, ವಸತಿ ಮೊದಲಾದ ಯೋಜನೆಗಳು ಜನರನ್ನು ಹೆಚ್ಚು ತಲುಪಿದೆ. ವಿದ್ಯುತ್, ನೀರು ಮೊದಲಾದ ಮೂಲಸೌಕರ್ಯಗಳನ್ನು ಸಹ ಒದಗಿಸುವಲ್ಲಿ ಸರ್ಕಾರ ಯಶಸ್ವಿಯಾಗಿದೆ ಎಂದು ಅವರು ತಿಳಿಸಿದರು. ಜನರಿಗೆ ಆಹಾರ ಭದ್ರತೆ ಒದಗಿಸಲಾಗಿದೆ. ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಮೂಲಕ ಮಹತ್ವದ ಬದಲಾವಣೆಗೆ ಸರ್ಕಾರ ಮನ ಮಾಡಿದೆ. ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆಯಾಗಿದೆ. ಹೀಗೆ ಎಲ್ಲಾ ಕ್ಷೇತ್ರಗಳಲ್ಲೂ ಜನಸ್ನೇಹಿ ಅಭಿವೃದ್ಧಿ ಮಾಡುವತ್ತ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಅವರು ತಿಳಿಸಿದರು.
ದೇಶದ ತಾಂತ್ರಿಕ ಕ್ಷೇತ್ರದಲ್ಲಿ ಡಿಜಿಟಲ್ ಕ್ರಾಂತಿಯಾಗುತ್ತಿದೆ. ಉದ್ಯಮ ಕ್ಷೇತ್ರಕ್ಕೆ ಮಹತ್ವ ನೀಡಲಾಗಿದೆ. ಕೃಷಿ ಕ್ಷೇತ್ರದಲ್ಲಿಯೂ ತಾಂತ್ರಿಕ ಬೆಳವಣಿಗೆ ಸಾಧ್ಯವಾಗುತ್ತಿದೆ ಎಂದು ಅವರು ಹೇಳಿದರು. ಭಾರತೀಯ ರೈಲ್ವೆ ಕುರಿತಾಗಿಯೂ ಮಾತನಾಡಿದ ಅವರು, ಭಾರತೀಯ ರೈಲ್ವೆಯಲ್ಲಿ ಆಧುನೀಕರಣವಾಗುತ್ತಿದೆ ಎಂದು ಹೇಳಿದರು.
ಈ ಆಜಾದಿ ಕಾ ಅಮೃತ ಮಹೋತ್ಸವ ದೇಶದಲ್ಲಿ 2023 ರ ವರೆಗೆ ನಡೆಯಲಿದೆ ಎಂದು ಪ್ರಧಾನಿ ಮೋದಿ ಹೇಳಿದರು.
ಧ್ವಜಾರೋಹಣಕ್ಕೂ ಮುನ್ನ ರಾಜ್ಘಾಟ್ಗೆ ತೆರಳಿ ಗಾಂಧಿಯವರ ಸ್ಮಾರಕಕ್ಕೆ ಗೌರವ ನಮನ ಸಲ್ಲಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.