ನವದೆಹಲಿ: ಏಕ ಶ್ರೇಣಿ, ಏಕ ಪಿಂಚಣಿ ಯೋಜನೆ ಜಾರಿಗೆ ಆಗ್ರಹಿಸಿ ಮಾಜಿ ಸೈನಿಕರು ನಡೆಸುತ್ತಿರುವ ಪ್ರತಿಭಟನೆ ಸರ್ಕಾರವನ್ನು ಇಕ್ಕಟ್ಟಿಗೆ ದೂಡಿದೆ. ಈ ನಡುವೆ ಮಾಜಿ ಸೇನಾ ಮುಖ್ಯಸ್ಥ ಮತ್ತು ಕೇಂದ್ರ ಸಚಿವ ವಿ.ಕೆ.ಸಿಂಗ್ ಅವರ ಪುತ್ರಿ ಕೂಡ ಮಾಜಿ ಸೈನಿಕರ ಪ್ರತಿಭಟನೆಗೆ ಕೈಜೋಡಿಸಿದ್ದು ಬಿಜೆಪಿಗೆ ಮತ್ತಷು ಮುಜುಗರವನ್ನುಂಟು ಮಾಡಿದೆ.
ವಿ.ಕೆ.ಸಿಂಗ್ ಅವರ ಪುತ್ರಿ ಮೃನಾಲ್ ಸಿಂಗ್ ಅವರು ಭಾನುವಾರದಿಂದ ಜಂತರ್ ಮಂತರ್ನಲ್ಲಿ ಪ್ರತಿಭಟನಾ ನಿರತರಾಗಿದ್ದು, ತಕ್ಷಣ ಸರ್ಕಾರ ಏಕ ಶ್ರೇಣಿ, ಏಕ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.
‘ನಾನು ಸೇನಾ ಕುಟುಂಬದಿಂದ ಬಂದಿದ್ದೇನೆ, ನನ್ನ ಅಜ್ಜ ಕೂಡ ಸೈನಿಕರಾಗಿದ್ದವರು. ಭವಿಷ್ಯದಲ್ಲಿ ನನ್ನ ಮಗ ಕೂಡ ಸೈನಿಕನಾಗಬಹುದು. ನನ್ನ ಬೆಂಬಲವನ್ನು ವ್ಯಕ್ತಪಡಿಸುವುದಕ್ಕಾಗಿ ಇಲ್ಲಿಗೆ ಬಂದಿದ್ದೇನೆ. ನಮ್ಮ ಬೇಡಿಕೆಯನ್ನು ಸರ್ಕಾರ ಪೂರೈಸುತ್ತದೆ ಎಂಬ ನಂಬಿಕೆ ಇದೆ. ಈ ವಿಷಯದ ಬಗ್ಗೆ ತಂದೆಯ ಬಳಿ ಮಾತನಾಡಿದ್ದೇನೆ. ಅವರು ಪ್ರಧಾನಿಗೆ ಪತ್ರವನ್ನೂ ಬರೆದಿದ್ದಾರೆ’ ಎಂದು ಅವರು ಹೇಳಿದ್ದಾರೆ.
ಕಳೆದ ನಾಲ್ಕು ದಶಕಗಳಿಂದ 2.5.ಮಿಲಿಯನ್ ಮಾಜಿ ಸೈನಿಕರು ಮತ್ತು ಹುತಾತ್ಮ ಸೈನಿಕರ ಪತ್ನಿಯರು ಏಕ ಶ್ರೇಣಿ, ಏಕ ಪಿಂಚಣಿ ಯೋಜನೆಗೆ ಆಗ್ರಹಿಸುತ್ತಿದ್ದಾರೆ. ಆದರೆ ಅವರ ಬೇಡಿಕೆ ಇದುವರೆಗೆ ಪೂರೈಕೆಯಾಗಿಲ್ಲ. ಹೀಗಾಗಿ ಜುಲೈ 12ರಿಂದ ಇವರು ಸರ್ಕಾರದ ಗಮನ ಸೆಳೆಯಲು ಜಂತರ್ ಮಂತರ್ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.