ಬೆಂಗಳೂರು: ದೇಶದ 75 ನೇ ಸ್ವಾತಂತ್ರ್ಯ ಸಂಭ್ರಮದ ಹಿನ್ನೆಲೆಯಲ್ಲಿ ನಗರದ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಧ್ವಜಾರೋಹಣ ನೆರವೇರಿಸಿ, ಶುಭಾಶಯ ಕೋರಿದರು.
ಬಳಿಕ ಮಾತನಾಡಿದ ಅವರು, ಈ ಧ್ವಜಾರೋಹಣದ ಅವಕಾಶ ನನಗೆ ದೊರೆತಿರುವುದು ನನ್ನ ಸೌಭಾಗ್ಯ. ಭಾರತ ಯಶಸ್ವಿ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ದೇಶದ ಅಖಂಡತೆ, ಸಾರ್ವಭೌಮತೆ, ಏಕತೆಯನ್ನು ಉಳಿಸಿಕೊಂಡು ಸಾಗುವ ದೃಷ್ಟಿಯಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಆಳವಾಗಿ ಬೇರೂರಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.
ಡಾ. ಬಿ. ಆರ್. ಅಂಬೇಡ್ಕರ್ ಅವರ ದೂರದೃಷ್ಟಿ, ಸಮಾನತೆ, ದೇಶದ ಕಲ್ಯಾಣಕ್ಕೆ ಸಂವಿಧಾನ ನಮಗೆ ಭಗವದ್ಗೀತೆಯಂತೆ ಎಂದು ಅವರು ತಿಳಿಸಿದರು. ಸತ್ಯಮೇವ ಜಯತೇ ಎಂಬ ಘೋಷಣೆ ನಮ್ಮ ಸ್ವಾತಂತ್ರ್ಯದ ದಾರಿದೀಪವಾಗಿದೆ ಎಂದು ಅವರು ತಿಳಿಸಿದರು. ಇಂದು ಸಂಗೊಳ್ಳಿ ರಾಯಣ್ಣ ಅವರ ಜನ್ಮದಿನವೂ ಆಗಿದ್ದು, ಅವರ ತ್ಯಾಗ, ಬಲಿದಾನಗಳನ್ನು ಈ ಸಂದರ್ಭದಲ್ಲಿ ಸ್ಮರಿಸುವುದಾಗಿಯೂ ಬೊಮ್ಮಾಯಿ ಹೇಳಿದರು.
ಈಗ ಭಾರತ ವಿಶ್ವಕ್ಕೆ ಹೆಚ್ಚು ಗಮನ ಸೆಳೆಯುವಂತೆ ಬೆಳೆದಿದೆ. ದೇಶದ ಸಾಮಾಜಿಕ, ಆರ್ಥಿಕ, ಸಾಂಸ್ಕೃತಿಕ ಪರಂಪರೆ ವಿಶ್ವವನ್ನು ಸೆಳೆದಿದೆ. ಗ್ರಾಮೀಣ ಮಟ್ಟದಿಂದ ಬಾಹ್ಯಾಕಾಶದ ವರೆಗೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹಲವು ಯೋಜನೆಗಳ ಮೂಲಕ ಅಭಿವೃದ್ಧಿಯ ಮಂತ್ರ ಪಠಿಸಿದೆ ಎಂದು ಅವರು ಹೇಳಿದರು. ರೈತನನ್ನು ಕೇಂದ್ರ ಬಿಂದುವನ್ನಾಗಿಸುವ ನಿಟ್ಟಿನಲ್ಲಿಯೂ ಸರ್ಕಾರದ ಯೋಜನೆಗಳು ಸ್ಮರಣೀಯ ಎಂದು ಅವರು ತಿಳಿಸಿದರು.
ಇಂದಿನಿಂದಲೇ ನವಕರ್ನಾಟಕ ನಿರ್ಮಾಣ ಕೆಲಸಗಳು ನಡೆಯಲಿವೆ. ಕೃಷಿ, ಕೈಗಾರಿಕಾ ಕ್ಷೇತ್ರದಲ್ಲಿ ಅಭೂತಪೂರ್ವ ಬದಲಾವಣೆಗೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳುತ್ತಿದೆ ಎಂದು ತಿಳಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.