ಬೆಂಗಳೂರು: ನಗರದಲ್ಲಿ ಮತ್ತೆ ಕೊರೋನಾ ಲಾಕ್ಡನ್ ಮಾಡುವ ಪರಿಸ್ಥಿತಿ ಇಲ್ಲ. ಕೊರೋನಾ ಪ್ರಕರಣಗಳ ಆಧಾರದ ಮೇಲೆ ಅದರ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಬೇಕಾಗುತ್ತದೆ ಎಂದು ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.
ನಗರದಲ್ಲಿ ಕಳೆದ 50 ದಿನಗಳಿಂದೀಚೆಗೆ ಕೊರೋನಾ ಸೋಂಕಿತರ ದೈನಂದಿನ ಪ್ರಕರಣ 300 ರಿಂದ 400 ರ ವರೆಗೆ ಇದೆ. ಈ ಸಂಖ್ಯೆ ಏರಿಕೆಯಾದ ಸಂದರ್ಭದಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕಾಗಬಹುದು ಎಂದು ಅವರು ತಿಳಿಸಿದ್ದಾರೆ. ಸೋಂಕು ಹೆಚ್ಚಾದಲ್ಲಿ ವಾರಾಂತ್ಯ ಕರ್ಫ್ಯೂ ಸೇರಿದಂತೆ ಇನ್ನಿತರ ಬಿಗಿ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಅಶೋಕ್ ಹೇಳಿದ್ದಾರೆ.
ಕೊರೋನಾ ನಿಯಂತ್ರಣ ನಿಟ್ಟಿನಲ್ಲಿ ಇಂತಹ ಕ್ರಮಗಳ ಅಳವಡಿಕೆ ಕಡ್ಡಾಯ ಎಂದು ಅವರು ತಿಳಿಸಿದ್ದಾರೆ. ಹಬ್ಬಗಳ ಸಂದರ್ಭದಲ್ಲಿ ಕೊರೋನಾ ಸೋಂಕು ಹರಡುವ ವ್ಯಾಪಕತೆ ಹೆಚ್ಚು. ಈ ನಿಟ್ಟಿನಲ್ಲಿ ಸೋಂಕು ನಿಯಂತ್ರಣಕ್ಕೆ ಏನೆಲ್ಲಾ ಕ್ರಮ ಕೈಗೊಳ್ಳಬಹುದು ಎಂಬುದರ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.