ನವದೆಹಲಿ: ಅಫ್ಘನಿಸ್ಥಾನದಲ್ಲಿರುವ ಮರಳುವ ಭಾರತೀಯ ಪ್ರಜೆಗಳ ಸುರಕ್ಷತೆ, ಸ್ಥಳಾಂತರಕ್ಕೆ ಕೇಂದ್ರ ಸರ್ಕಾರ ಎಲ್ಲಾ ರೀತಿಯ ಅನುಕೂಲ ಒದಗಿಸಲಿದೆ ಎಂದು ಭಾರತೀಯ ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.
ಅಫ್ಘನಿಸ್ಥಾನದಲ್ಲಿರುವ ಸಿಖ್, ಹಿಂದೂ ಸಮುದಾಯಗಳ ಪ್ರತಿನಿಧಿಗಳ ಜೊತೆಗೆ ನಿರಂತರ ಸಂಪರ್ಕದಲ್ಲಿದ್ದೇವೆ. ಹಾಗೆಯೇ ಆ ದೇಶವನ್ನು ತೊರೆಯಲು ಬಯಸುವವರಿಗೆ ಬೇಕಾದ ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಮಾಡಿಕೊಡುವುದಾಗಿ ಸಚಿವಾಲಯ ಹೇಳಿದೆ.
ಅಲ್ಲಿಂದ ಸ್ವದೇಶಕ್ಕೆ ಮರಳಲು ಬಯಸುವ ಭಾರತದ ಪ್ರಜೆಗಳಿದ್ದಾರೆ. ಅವರೊಂದಿಗೆ ಸರ್ಕಾರ ಸಂಪರ್ಕ ಸಾಧಿಸಿದೆ. ಕಾಬೂಲ್ ವಿಮಾನ ನಿಲ್ದಾಣದಲ್ಲಿ ಸಾವಿರಾರು ಜನರು ದೇಶ ತೊರೆಯಲು ಸೇರಿದ್ದ ಹಿನ್ನೆಲೆಯಲ್ಲಿ ಗೊಂದಲಗಳಾಗಿತ್ತು. ಈ ಹಿನ್ನೆಲೆಯಲ್ಲಿ ಏರ್ ಇಂಡಿಯಾ ವಿಮಾನ ಸಹ ತನ್ನ ಸೇವೆ ರದ್ದುಗೊಳಿಸುವಂತಾಗಿತ್ತು ಎಂದು ಸಚಿವಾಲಯ ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.