ಬೆಂಗಳೂರು: ರಾಜ್ಯದಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ಕೊಪ್ಪಳ, ಬಾಗಲಕೋಟೆ, ಬೀದರ್ನ ಔರಾದ್ನಲ್ಲಿ ಸೋಲಾರ್ ಪಾರ್ಕ್ ನಿರ್ಮಿಸುವುದಾಗಿ ಕೇಂದ್ರ ಸಚಿವ ಭಗವಂತ ಖೂಬಾ ತಿಳಿಸಿದ್ದಾರೆ.
ತಮ್ಮ ಗೃಹ ಕಚೇರಿಯಲ್ಲಿ ಮಾದ್ಯಮಗಳ ಜೊತೆಗೆ ಮಾತನಾಡಿದ ಅವರು, ಒಂದು ಮೆಗಾವ್ಯಾಟ್ ಯುನಿಟ್ ಉತ್ಪಾದನೆಗೆ ಆರಂಭಿಕ ಸರಾಸರಿ 3.57 ಕೋಟಿಯಿಂದ 4 ಕೋಟಿ ಗಳ ವರೆಗೆ ವೆಚ್ಚ ತಗುಲುತ್ತದೆ. ಆರಂಭಿಸಲಿರುವ ಪ್ರತಿಯೊಂದು ಪಾರ್ಕ್ನಲ್ಲಿಯೂ 1200 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಲಾಗುತ್ತದೆ ಎಂದು ಅವರು ಹೇಳಿದರು.
ಕೊಪ್ಪಳದಲ್ಲಿ 15 ಸಾವಿರ ಎಕರೆ, ಬಾಗಲಕೋಟೆಯಲ್ಲಿ 9600 ಎಕರೆ ಪ್ರದೇಶಗಳನ್ನು ಈಗಾಗಲೇ ಗುರುತಿಸಲಾಗಿದೆ. ಔರಾದ್ನಲ್ಲಿ ರೈತರ ಜಮೀನುಗಳನ್ನು 25 ವರ್ಷಗಳ ಒಪ್ಪಂದದ ಮೇಲೆ ಪಡೆದುಕೊಂಡು ಅವರಿಗೆ ಪ್ರತಿ ಎಕರೆಗೆ 25 ಸಾವಿರ ನೀಡಲಾಗುತ್ತದೆ. ಪಾರ್ಕ್ಗಳ ನಿರ್ಮಾಣಕ್ಕೆ ಈಗಾಗಲೇ ಟೆಂಡರ್ ಸಹ ಕರೆಯಲಾಗಿದೆ ಎಂದು ಅವರು ತಿಳಿಸಿದರು. ಹಾಗೆಯೇ ರಾಷ್ಟ್ರೀಯ ಸೋಲಾರ್ ನೀತಿಯನ್ನು ಪರಿಷ್ಕರಿಸಲಾಗುತ್ತದೆ. ಜೊತೆಗೆ ಸೋಲಾರ್ ಪಾರ್ಕ್ನಲ್ಲಿ ನಿರ್ಮಾಣವಾದ ವಿದ್ಯುತ್ ಅನ್ನು ವಿದ್ಯುತ್ ಕಂಪೆನಿಗಳು ಕಡ್ಡಾಯವಾಗಿ ಖರೀದಿಸಲು ಆದೇಶಿಸುವುದಾಗಿ ಖೂಬಾ ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.