ನವದೆಹಲಿ: ತಾಲಿಬಾನ್ ಉಗ್ರಗಾಮಿಗಳು ಅಫ್ಘಾನಿಸ್ಥಾನವನ್ನು ವಶಪಡಿಸಿಕೊಂಡಿದ್ದು, ಈ ನಿಟ್ಟಿನಲ್ಲಿ ದೇಶದ ಭದ್ರತಾ ವಿಷಯವಾಗಿ ಪ್ರಧಾನಿ ಮೋದಿ ಅವರು ಮಹತ್ವದ ಸಭೆ ನಡೆಸಿದರು.
ಅಫ್ಘಾನಿಸ್ಥಾನದಲ್ಲಿ ತಾಲಿಬಾನ್ ಉಗ್ರರಿಂದ ಅಸ್ಥಿರತೆ ನಿರ್ಮಾಣವಾಗಿದೆ. ಇದರಿಂದ ಭಾರತದ ಮೇಲೆಯೂ ವ್ಯತಿರಿಕ್ತ ಪರಿಣಾಮಗಳಾಗುವ ಸಾಧ್ಯತೆ ಇದೆ. ಇದನ್ನು ಸಮರ್ಥವಾಗಿ ನಿರ್ವಹಣೆ ಮಾಡುವ ನಿಟ್ಟಿನಲ್ಲಿ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಈ ಮಹತ್ವದ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಮುಂದಿನ ಸಂಭಾವ್ಯ ಸಮಸ್ಯೆಗಳನ್ನು ಎದುರಿಸಲು ಸನ್ನದ್ಧವಾಗಿರುವ ಹಿನ್ನೆಲೆಯಲ್ಲಿ ಈ ಚರ್ಚೆ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಅಫ್ಘಾನಿಸ್ಥಾನದ ಸಮಸ್ಯೆಯ ಬಗೆಗೆ ಕೇಂದ್ರ ಸರ್ಕಾರ ನಿರಂತರವಾಗಿ ಪರಿಸ್ಥಿತಿ ಅವಲೋಕನ ಮಾಡುತ್ತಿದೆ. ಅಧಿಕಾರಿಗಳ ಜೊತೆಗೂ ಸಂಪರ್ಕ ಸಾಧಿಸಿ ಮಾಹಿತಿ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಈ ಸಭೆಯಲ್ಲಿ ಗೃಹ ಸಚಿವ ಅಮಿತ್ ಷಾ, ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಭದ್ರತಾ ಸಲಹೆಗಾರ ಅಜಿತ್ ಧೋವಲ್ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.