ಬೆಂಗಳೂರು: ಲಸಿಕಾ ಅಭಿಯಾನಕ್ಕೆ ತಮ್ಮ ಸಾಂಸ್ಥಿಕ ಹೊಣೆಗಾರಿಕೆ ನಿಧಿಯನ್ನು ಔಷಧ ವಲಯದ ಉದ್ದಿಮೆಗಳು ದೇಣಿಗೆ ನೀಡುವಂತೆ ಸಚಿವ ಡಾ. ಕೆ. ಸುಧಾಕರ್ ವಿನಂತಿಸಿಕೊಂಡಿದ್ದಾರೆ.
ರಾಜ್ಯಕ್ಕೆ 75% ಲಸಿಕೆಗಳನ್ನು ಸರ್ಕಾರ ಉಚಿತವಾಗಿ ನೀಡುತ್ತದೆ. ಉಳಿದ 25% ಲಸಿಕೆಯನ್ನು ಖಾಸಗಿಯವರಿಗೆ ಹಂಚಿಕೆ ಮಾಡುತ್ತದೆ. ಖಾಸಗಿ ವಲಯಕ್ಕೆ ಹಂಚಿಕೆ ಮಾಡಲಾದ ಲಸಿಕೆಯನ್ನು ಸಿಎಸ್ಆರ್ ನಿಧಿಯಡಿ ಖರೀದಿ ಮಾಡಿ ದೇಣಿಗೆ ರೂಪದಲ್ಲಿ ನಿಡುವಂತೆ ರಾಜ್ಯದ ಪ್ರಮುಖ ಉದ್ದಿಮೆದಾರರಲ್ಲಿ ಅವರು ಮನವಿ ಮಾಡಿದ್ದಾರೆ.
ಹಾಗೆಯೇ ಸಂಭವನೀಯ ಮೂರನೇ ಅಲೆಯನ್ನು ಸಮರ್ಥವಾಗಿ ನಿಭಾಯಿಸಲು ಸರ್ಕಾರದ ಜೊತೆಗೆ ಖಾಸಗಿ ಉದ್ದಿಮೆಗಳು ಕೈಜೋಡಿಸಿದರೆ ಫಲಿತಾಂಶ ಹೆಚ್ಚು ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕೇವಲ ಔಷಧ ವಲಯಗಳು ಮಾತ್ರವಲ್ಲದೆ, ಪೌಷ್ಟಿಕ ಆಹಾರ, ಸೌಂದರ್ಯವರ್ಧಕ ಉದ್ದಿಮೆದಾರರ ಜೊತೆಗೂ ಮುಂದಿನ ದಿನಗಳಲ್ಲಿ ಸಭೆ ನಡೆಸಿ ಸಿಎಸ್ಆರ್ ನಿಧಿಯ ನೆರವನ್ನು ಲಸಿಕಾ ಆಂದೋಲನಕ್ಕೂ ವಿಸ್ತರಣೆ ಮಾಡಲು ಮನವಿ ಮಾಡುವುದಾಗಿ ಅವರು ಹೇಳಿದ್ದಾರೆ.
ಕೊರೋನಾ ನಿರ್ವಹಣೆ ಸರ್ಕಾರದ ಜೊತೆಗೆ ಸಮಾಜದ ಹೊಣೆಗಾರಿಕೆಯೂ ಆಗಿದ್ದು, ಈ ನಿಟ್ಟಿನಲ್ಲಿ ಉದ್ದಿಮೆಗಳು ಸರ್ಕಾರದ ಜೊತೆಗೆ ನಿಲ್ಲುವಂತೆ ಅವರು ಮನವಿ ಮಾಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.