ನವದೆಹಲಿ: ದೇಶದ ನೂತನ ಗುಜರಿ ನೀತಿಯ ಅನ್ವಯ, ಹಳೆಯ ವಾಹನಗಳನ್ನು ಗುಜರಿಗೆ ಹಾಕಿ ಬಳಿಕ ಖರೀದಿ ಮಾಡುವ ಹೊಸ ವಾಹನಗಳಿಗೆ 25% ರಸ್ತೆ ತೆರಿಗೆ ವಿನಾಯಿತಿ ನೀಡಬೇಕು ಎಂದು ಕೇಂದ್ರ ಸರ್ಕಾರ ರಾಜ್ಯಗಳಿಗೆ ಸೂಚಿಸಿದೆ.
ಈ ಬಗ್ಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಮಾತನಾಡಿದ್ದು, ಯಾವುದೇ ರಾಜಕೀಯ ಉದ್ದೇಶ ಇಟ್ಟುಕೊಂಡು ಈ ವಿನಾಯಿತಿ ನೀಡಲು ಮುಂದಾಗಿಲ್ಲ. ಬದಲಾಗಿ ಸಾರ್ವಜನಿಕ ಹಿತಾಸಕ್ತಿಯ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ. ನೂತನ ರಾಷ್ಟ್ರೀಯ ಅಟೋಮೊಬೈಲ್ ಗುಜರಿ ನೀತಿ ಅನುಷ್ಠಾನಗೊಂಡ ಬಳಿಕ ರಾಜ್ಯಗಳ ಆದಾಯ ಹೆಚ್ಚಲಿದೆ. ಈ ಸಂಬಂಧ ಆತಂಕ ಬೇಡ ಎಂದು ಅವರು ಹೇಳಿದ್ದಾರೆ.
ರಸ್ತೆ ವಿನಾಯಿತಿ ನೀಡುವಂತೆ ನಾವು ಕೇವಲ ರಾಜ್ಯಗಳಿಗಷ್ಟೇ ತಿಳಿಸುತ್ತಿಲ್ಲ. ಬದಲಾಗಿ ಈ ಸಂಬಂಧ ನಿಯಮಾವಳಿಗಳಲ್ಲಿಯೂ ಅಗತ್ಯ ಮಾರ್ಪಾಡು ಮಾಡುತ್ತೇವೆ. ವೈಯಕ್ತಿಕ ವಾಹನಗಳಿಗೆ 25% ಮತ್ತು ವಾಣಿಜ್ಯ ಉದ್ದೇಶದ ವಾಹನಗಳಿಗೆ 15% ಗಳಷ್ಟು ವಿನಾಯಿತಿ ನೀಡುವಂತೆ ಕಾನೂನು ರೂಪಿಸಲಾಗುವುದು ಎಂದು ಹೇಳಿದ್ದಾರೆ. ಶೀಘ್ರದಲ್ಲೇ ಹೊಸ ನಿಯಮಗಳು ಜಾರಿಯಾಗಲಿವೆ ಎಂದು ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.