ಬೆಂಗಳೂರು: ಬಿಜೆಪಿ ಸರ್ಕಾರ ಸ್ಥಿರವಾಗಿದೆ. ನಮ್ಮ ಸರ್ಕಾರ ಬೀಳುತ್ತದೆ ಎಂಬ ವಿಚಾರದಲ್ಲಿ ಕನಸು ಕಂಡವರ ಕನಸುಗಳು ನನಸಾಗುವುದಿಲ್ಲ ಎಂದು ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಚಿಕ್ಕಮಗಳೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಇನ್ನು ಆರು ತಿಂಗಳೊಳಗೆ ಬಿಜೆಪಿ ಸರ್ಕಾರ ಬಿದ್ದು ಹೋಗುವ ಕನಸು ಕಾಣುತ್ತಿದೆ. ಕನಸು ಕಾಣುವ ಹಕ್ಕು ಎಲ್ಲರಿಗೂ ಇದೆ. ಆದರೆ ಬಿಜೆಪಿ ಸರ್ಕಾರ ಸುಭದ್ರವಾಗಿದ್ದು, ಸರ್ಕಾರ ಬೀಳುವ ಕನಸು ಕಾಣುವವರ ಕನಸು ನನಸಾಗದು ಎಂದು ಅವರು ಕಾಂಗ್ರೆಸ್ ಪಕ್ಷಕ್ಕೆ ತಿರುಗೇಟು ನೀಡಿದ್ದಾರೆ.
ರಾಜ್ಯ ಬಿಜೆಪಿ ಸರ್ಕಾರ ಸುಸ್ಥಿರವಾಗಿದೆ. ಸರ್ಕಾರ ಭದ್ರವಾಗಿದ್ದು, ಬಿಜೆಪಿ ಪಕ್ಷವನ್ನು ಪಥನಗೊಳಿಸುವ ಕಾಂಗ್ರೆಸ್ ಪಕ್ಷದ ಕನಸು ಕನಸಾಗಿಯೇ ಉಳಿಯಲಿದೆ ಎಂದು ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.