ಬೆಂಗಳೂರು: ಕಳೆದ 13 ವರ್ಷಗಳಿಂದ ರಾಜ್ಯದ ಟಯರ್ – 2 ನಗರಗಳಿಗೆ ಯಾವುದೇ ರೀತಿಯ ಅಭಿವೃದ್ಧಿ ಯೋಜನೆ ರೂಪಸದೇ ಇರುವುದನ್ನು ಗಮನಿಸಿದ ರಾಜ್ಯ ಸರ್ಕಾರ, ಕಲಬುರ್ಗಿ, ಬಳ್ಳಾರಿ, ವಿಜಯಪುರ, ದಾವಣಗೆರೆಯಂತಹ ನಗರಗಳಿಗೆ ಸಂಬಂಧಿಸಿದಂತೆ ಸಿಡಿಪಿಯನ್ನು ತಕ್ಷಣ ಸಿದ್ಧಪಡಿಸುವಂತೆ ಆದೇಶಿಸಿದೆ.
ಈ ಬಗ್ಗೆ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಅವರು ಮಾತನಾಡಿದ್ದು, ಟಯರ್ – 2 ನಗರಗಳಿಗೆ ಸಂಬಂಧಿಸಿದಂತೆ ಸಿಡಿಪಿ ಸಿದ್ಧಪಡಿಸಲು ಮತ್ತು ಅದನ್ನು ಶೀಘ್ರದಲ್ಲೇ ಕಾರ್ಯಗತಗೊಳಿಸಲು ಆದೇಶ ನೀಡಿರುವುದಾಗಿ ತಿಳಿಸಿದ್ದಾರೆ. ಈ ಯೋಜನೆಗೆ ಮೊದಲು ತಾತ್ಕಾಲಿಕ ಅನುಮೋದನೆ ಪಡೆಯಲಾಗಿದ್ದು, ಕೆಲವೇ ತಿಂಗಳುಗಳಲ್ಲಿ ಅಂತಿಮ ಅನುಮೋದನೆ ದೊರೆಯಲಿದೆ ಎಂದು ತಿಳಿಸಿದರು.
ಈ ಸಿಡಿಪಿಗಳಲ್ಲಿ ಕಡ್ಡಾಯವಾಗಿ ಭೂಬಳಕೆಯ ನಿರ್ಬಂಧಗಳು ಇರುತ್ತವೆ. ಮಾಸ್ಟರ್ ಪ್ಲಾನ್ ಇಲ್ಲವಾದಲ್ಲಿ ಭೂ ಬಳಕೆಗೆ ಯಾವುದೇ ನಿರ್ಬಂಧ ಇರುವುದಿಲ್ಲ. ಇದರಿಂದ ಅಭಿವೃದ್ಧಿ ಕೆಲಸಗಳಿಗೆ ಅಡ್ಡಿಯಾಗುವ ಸಾಧ್ಯತೆ ಇದೆ. ತಜ್ಞರು ಸೂಚಿಸುವ ನಿರ್ದೇಶನದ ಮೇಲೆಯೇ ಸಿಡಿಪಿಗಳನ್ನು ತಯಾರಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.