ಬೆಂಗಳೂರು: ಕೊರೋನಾ ತಾಂತ್ರಿಕ ಸಮಿತಿ, ಟಾಸ್ಕ್ಫೋರ್ಸ್ ಹಾಗೂ ಮಕ್ಕಳ ತಜ್ಞರ ವರದಿಗಳನ್ನು ಆಧರಿಸಿಕೊಂಡು ರಾಜ್ಯದಲ್ಲಿ 9 – 12 ರ ವರೆಗಿನ ತರಗತಿಗಳನ್ನು ಸರ್ಕಾರ ಆರಂಭಿಸಲಿದೆ ಎಂದು ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ತಿಳಿಸಿದ್ದಾರೆ.
ಕಳೆದ ಒಂದೂವರೆ ವರ್ಷಗಳಿಂದ ಕೊರೋನಾ ಸಂಕಷ್ಟ ಇದ್ದರೂ, ಈ ನಡುವೆ ಮಕ್ಕಳ ಕಲಿಕೆಗೆ ಅನುಕೂಲವಾಗುವಂತೆ ಆನ್ಲೈನ್ ತರಗತಿಗಳನ್ನು ನಡೆಸಲಾಗಿದೆ. ಆದರೂ 30% – 40% ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಿದ್ದಾರೆ ಎಂದು ಸಮೀಕ್ಷೆಗಳು ಹೇಳುತ್ತಿವೆ ಎಂದು ಸಚಿವರು ತಿಳಿಸಿದ್ದಾರೆ. ಇದೀಗ ಪೋಷಕರ ಹಾಗೂ ಮಕ್ಕಳ ಮೇಲಿನ ಧೈರ್ಯದಿಂದ ಶಾಲಾರಂಭಕ್ಕೆ ಸಕಲ ಸಿದ್ಧತೆ ನಡೆದಿದೆ ಎಂದು ಸಚಿವರು ನುಡಿದಿದ್ದಾರೆ.
ಈ ಸಂಬಂಧಿಸಿದಂತೆ ಎಲ್ಲಾ ರೀತಿಯ ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲನೆ ಮಾಡುವಂತೆಯೂ ಡಿಡಿಪಿಐ, ಬಿಇಒಗಳ ಜೊತೆಗೆ ಮಾತುಕತೆ ನಡೆಸಲಾಗುತ್ತಿದೆ. 9 – 12 ನೇ ತರಗತಿಗಳ ಆರಂಭದ ಯಶಸ್ಸಿನ ಬಳಿಕ 1 – 8 ನೇ ತರಗತಿಗಳನ್ನು ಆರಂಭಿಸುವ ಬಗ್ಗೆ ಸರ್ಕಾರ ನಿರ್ಣಯಗಳನ್ನು ಕೈಗೊಳ್ಳಲಿದೆ. ವಿದ್ಯಾರ್ಥಿಗಳು ಶಾಲೆಗೆ ಬರಲೇ ಬೇಕೆಂಬ ಒತ್ತಡವಿಲ್ಲ. ಆನ್ಲೈನ್ ತರಗತಿಗಳು ಸಹ ಮುಂದುವರಿಯುತ್ತವೆ ಎಂದು ಸಚಿವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.