ನವದೆಹಲಿ: ಖಾದ್ಯ ತೈಲಗಳ ರಾಷ್ಟ್ರೀಯ ಮಿಷನ್ ಜಾರಿಗೊಳಿಸಲು ಸಂಪುಟ ಅನುಮೋದನೆ ನೀಡಿದ್ದು, ಆ ಮೂಲಕ ತಾಳೆ ಎಣ್ಣೆ ಆಮದು ನಿಯಂತ್ರಣದ ಪ್ರಮುಖ ನಿರ್ಧಾರವನ್ನು ಕೇಂದ್ರ ಸರ್ಕಾರ ತೆಗೆದುಕೊಂಡಿದೆ.
ಈ ಬಗ್ಗೆ ಕೇಂದ್ರ ಸಚಿವ ಅನುರಾಗ್ ಸಿಂಗ್ ಠಾಕೂರ್ ಮಾತನಾಡಿದ್ದು, ಖಾದ್ಯ ತೈಲಗಳ ಆಮದು ಕಡಿಮೆ ಮಾಡಲು ಅನುಕೂಲವಾಗುವಂತೆ, ಆಮದು ತೈಲಗಳ ಮೇಲಿನ ಅವಲಂಬನೆ ಕಡಿಮೆ ಮಾಡಲು ಖಾದ್ಯ ತೈಲಗಳು – ತೈಲ ಪಾಮ್ ಮೇಲೆ ಕೇಂದ್ರ ಸಚಿವ ಸಂಪುಟ 11,040 ಕೋಟಿ ರೂ. ವೆಚ್ಚದ ರಾಷ್ಟ್ರೀಯ ಮಿಷನ್ ಜಾರಿಗೊಳಿಸಲು ಅನುಮೋದನೆ ನೀಡಿರುವುದಾಗಿ ತಿಳಿಸಿದ್ದಾರೆ.
ಈ ಯೋಜನೆಯನ್ನು ಈಶಾನ್ಯ ಪ್ರದೇಶ, ಅಂಡಮಾನ್ ಮತ್ತು ನಿಕೋಬಾರ್ಗಳ ಮೇಲೆ ವಿಶೇಷ ಗಮನವನ್ನು ನೀಡಿ ಜಾರಿಗೊಳಿಸಲಾಗುತ್ತಿದೆ. ಇದರ ಮೂಲಕ ಎಣ್ಣೆ ಬೀಜಗಳ ಉತ್ಪಾದನೆ ಹೆಚ್ಚಿಸುವುದು, ಎಣ್ಣೆ ಬೀಜ ಉತ್ಪಾದಕರಿಗೆ ಬೆಂಬಲ, ಸಹಕಾರ ನೀಡುವುದು ಮೊದಲಾದವುಗಳ ಮೇಲೆ ಗಮನ ಕೇಂದ್ರೀಕರಿಸಲಿದೆ. ಇದು ಎಣ್ಣೆ ತಯಾರಿಯ ಕಚ್ಚಾ ವಸ್ತುಗಳ ಉತ್ಪಾದನೆಗೆ ದೊಡ್ಡ ಪ್ರಮಾಣದ ಭೂಮಿಯನ್ನು ಬಳಕೆ ಮಾಡಿಕೊಳ್ಳುವಲ್ಲಿಯೂ ಗಮನ ಹರಿಸಲಿದೆ ಎಂದು ಅನುರಾಗ್ ತಿಳಿಸಿದ್ದಾರೆ. ಖಾದ್ಯ ತೈಲಗಳ ದೇಶೀಯ ಉತ್ಪಾದನೆ ಹೆಚ್ಚಿಸಲು ಈ ಉಪಕ್ರಮ ಮುಖ್ಯವಾಗಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.