ಶ್ರೀನಗರ: ಕಣಿವೆ ರಾಜ್ಯ ಜಮ್ಮು ಕಾಶ್ಮೀರದ ಎಲ್ಲಾ ಶಾಲೆಗಳು, ಅಂಗನವಾಡಿಗಳಿಗೆ ನಿಗದಿ ಮಾಡಲಾದ ದಿನಕ್ಕೂ ಮೊದಲೇ ಶುದ್ಧ ಕುಡಿಯುವ ನೀರು ಪೂರೈಕೆಯನ್ನು ಕೇಂದ್ರ ಸರ್ಕಾರ ಮಾಡಿದ್ದು, ಈ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪ್ರಧಾನಿ ಮೋದಿ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಶಾ, ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಜಮ್ಮು ಕಾಶ್ಮೀರವು ಶಾಂತಿ ಮತ್ತು ಸಮೃದ್ಧಿಗೆ ಸಮಾನಾರ್ಥಕವಾಗುತ್ತಿದೆ. ಶುದ್ಧ ಕುಡಿಯುವ ನೀರಿನ ಪೂರೈಕೆಯನ್ನು ಖಾತ್ರಿಪಡಿಸಿರುವುದಕ್ಕಾಗಿ ಪ್ರಧಾನಿ ಮೋದಿ, ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ನಿಗದಿತ ಸಮಯಕ್ಕಿಂತ ಮೊದಲೇ ರಾಜ್ಯದ ಎಲ್ಲಾ ಶಾಲೆಗಳು, ಅಂಗನವಾಡಿಗಳು ಶುದ್ಧ ಕುಡಿಯುವ ನೀರು ಪಡೆಯುವಂತಾಗಿದೆ ಎಂದು ಅವರು ತಿಳಿಸಿದ್ದಾರೆ.
ಈ ಹಿಂದೆ ಆಡಳಿತ ನಡೆಸಿದ್ದ ಸರ್ಕಾರಗಳು ಜಮ್ಮು ಕಾಶ್ಮೀರವನ್ನು ಅಭಿವೃದ್ಧಿಯಿಂದ ವಂಚಿತವನ್ನಾಗಿ ಮಾಡಿದ್ದವು. ಅವರ ಸ್ವಂತ ಕುಟುಂಬಗಳ ಅಭಿವೃದ್ಧಿಯತ್ತಲೇ ಗಮನ ಹರಿಸಿದ್ದವು. ಆದರೆ ಪ್ರಧಾನಿ ಮೋದಿ ಅವರ ಸರ್ಕಾರ ರಾಜ್ಯದಲ್ಲಿ ಅಭಿವೃದ್ಧಿಯ ಕ್ರಾಂತಿ ಆರಂಭಿಸಿದೆ. ಇದರ ಪರಿಣಾಮ ಬಡಜನರು ಮುಖ್ಯವಾಹಿನಿಗೆ ಬರುವಂತಾಗಿದೆ. ರಾಜ್ಯ ಎಲ್ಲಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆಯೂ ತೆರೆದುಕೊಳ್ಳುತ್ತಿದೆ ಎಂದು ಹೇಳಿದ್ದಾರೆ.
ಜಮ್ಮು ಕಾಶ್ಮೀರದ 22,422 ಶಾಲೆಗಳು, 23,926 ಅಂಗನವಾಡಿ ಕೇಂದ್ರಗಳಿಗೆ ಕೇಂದ್ರ ಸರ್ಕಾರ ಶುದ್ಧ ಕುಡಿಯುವ ನೀರು ಒದಗಿಸಿದೆ ಎಂದು ಶಾ ಮಾಹಿತಿ ನೀಡಿದ್ದಾರೆ.
पहले की सरकारों ने दशकों तक जम्मू-कश्मीर के नागरिकों को विकास से वंचित रख सिर्फ अपने परिवारों की चिंता की।
मोदी जी ने यहाँ विकास के नये युग की शुरुआत कर गरीब नागरिकों को मुख्यधारा से जोड़ा उसी का परिणाम है कि आज जम्मू-कश्मीर हर क्षेत्र में आगे बढ़ रहा है। pic.twitter.com/1rVbtuh6ka
— Amit Shah (@AmitShah) August 19, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.