ಬೆಂಗಳೂರು: ಶ್ರಾವಣ ಮಾಸದಲ್ಲಿ ಸಾಲು ಸಾಲು ಹಬ್ಬಗಳು ಬಂದಿದ್ದು, ಕೊರೋನಾ ಮಾರ್ಗಸೂಚಿಗಳನ್ನು ಮರೆಯದೆ ಹಬ್ಬಗಳನ್ನು ಸರಳವಾಗಿ, ಸುರಕ್ಷಿತವಾಗಿ ಆಚರಣೆ ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಕೊರೋನಾ ಪ್ರಕರಣಗಳು ಹೆಚ್ಚಾಗದಂತೆ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಅಳವಡಿಸಿಕೊಂಡು ಹಬ್ಬಗಳನ್ನು ಆಚರಣೆ ಮಾಡುವಂತೆ ಅವರು ಸೂಚಿಸಿದ್ದಾರೆ. ಹಾಗೆಯೇ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ಕೊರೋನಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲನೆ ಮಾಡುವಂತೆ ತಿಳಿಸಿದ್ದಾರೆ.
ಹಬ್ಬಗಳ ಆಚರಣೆಯ ನೆಪದಲ್ಲಿ ಸಾರ್ವಜನಿಕ ಪ್ರದೇಶಗಳಲ್ಲಿ ಜನಸಂದಣಿಯಾಗದಂತೆ ಜಾಗರೂಕರಾಗಿರುವಂತೆ ಅವರು ಮನವಿ ಮಾಡಿದ್ದಾರೆ. ಪ್ರಸ್ತುತ ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ನಿಯಂತ್ರಣದಲ್ಲಿವೆ. ಮುಂದೆಯೂ ಸೋಂಕು ಏರಿಕೆಯಾಗದಂತೆ ತಡೆಯುವ ನಿಟ್ಟಿನಲ್ಲಿ ಮುನ್ನೆಚ್ಚರಿಕೆಗಳನ್ನು ಅಳವಡಿಸಿಕೊಳ್ಳುವಂತೆ ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.