ಗಾಂಧಿನಗರ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಗುಜರಾತಿನ ಸೋಮನಾಥದಲ್ಲಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಬಹು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.
ಈ ಯೋಜನೆಗಳಲ್ಲಿ ಸೋಮನಾಥ ವಾಯುವಿಹಾರ, ಸೋಮನಾಥ ವಸ್ತುಪ್ರದರ್ಶನ ಕೇಂದ್ರ, ಪಾರ್ವತಿ ದೇವಸ್ಥಾನ ಮತ್ತು ಹಳೆಯ (ಜುನ) ಸೋಮನಾಥ ದೇವಾಲಯದ ಪುನರ್ನಿರ್ಮಾಣ ಸೇರಿದೆ.
ವರ್ಚುವಲ್ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ಮೋದಿ, “ನಾವು ಧಾರ್ಮಿಕ ಪ್ರವಾಸೋದ್ಯಮವನ್ನು ಬಲಪಡಿಸಬೇಕಾಗಿದ್ದು, ಇದರಿಂದ ಯುವಕರಿಗೆ ಉದ್ಯೋಗ ಸೃಷ್ಟಿಯಾಗಲಿದೆ ಮತ್ತು ಯುವಜನತೆಗೆ ನಮ್ಮ ಪ್ರಾಚೀನತೆಯ ಬಗ್ಗೆ ಜ್ಞಾನ ಸಿಗಲಿದೆ. ನಂಬಿಕೆಯನ್ನು ಭಯೋತ್ಪಾದನೆಯಿಂದ ಹತ್ತಿಕ್ಕಲು ಸಾಧ್ಯವಿಲ್ಲ. ನಾವು ಇತಿಹಾಸದಿಂದ ಕಲಿಯಬೇಕು” ಎಂದಿದ್ದಾರೆ.
ಸೋಮನಾಥ ದೇವಸ್ಥಾನವು ನವ ಭಾರತದ ಗುರುತನ್ನು ಪ್ರತಿನಿಧಿಸುತ್ತದೆ ಎಂದು ಒತ್ತಿ ಹೇಳಿದ ಅವರು, ನೂರಾರು ವರ್ಷಗಳ ಇತಿಹಾಸದಲ್ಲಿ ಸೋಮನಾಥ ದೇವಸ್ಥಾನವು ಹಲವಾರು ಬಾರಿ ಹಾನಿಗೀಡಾಗಿದೆ, ಇಲ್ಲಿನ ವಿಗ್ರಹಗಳನ್ನು ಅಪವಿತ್ರಗೊಳಿಸಲಾಗಿದೆ, ಅದರ ಅಸ್ತಿತ್ವವನ್ನು ಅಳಿಸಲು ಎಲ್ಲ ಪ್ರಯತ್ನಗಳನ್ನು ಮಾಡಲಾಗಿತ್ತು. ಆದರೆ ಪ್ರತಿ ಬಾರಿ ಬಿದ್ದಾಗಲೂ ಅದು ಮತ್ತೆ ಎದ್ದು ನಿಂತಿತು ಎಂದಿದ್ದಾರೆ.
“ಇದನ್ನು ಸಾಧ್ಯವಾಗಿಸಿದ ಪ್ರಪಂಚದಾದ್ಯಂತದ ಸೋಮನಾಥ ಟ್ರಸ್ಟ್ನ ಎಲ್ಲಾ ಸದಸ್ಯರು ಮತ್ತು ಸೋಮನಾಥನ ಭಕ್ತರಿಗೆ ನನ್ನ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ” ಎಂದು ಪ್ರಧಾನಿ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.