ನವದೆಹಲಿ: ಆಜಾದಿ ಕಾ ಅಮೃತಮಹೋತ್ಸವ ಅಂಗವಾಗಿ ಕೇಂದ್ರ ಇಂಧನ ಸಚಿವಾಲಯವು ಅತ್ಯುತ್ತಮ ಕಾರ್ಯ ನಿರ್ವಹಿಸಿದ ಕೈಗಾರಿಕಾ ಘಟಕಗಳಿಗೆ ಇಂಧನ ಉಳಿತಾಯ ಪ್ರಮಾಣಪತ್ರಗಳನ್ನು ವಿತರಿಸಿದೆ.
ಸಚಿವಾಲಯದ ಕಾರ್ಯದರ್ಶಿ ಅಲೋಕ್ ಕುಮಾರ್ ಅವರು ಈ ಬಗ್ಗೆ ಮಾತನಾಡಿದ್ದು, ದೇಶದ ಸುಮಾರು 349 ಕೈಗಾರಿಕಾ ಘಟಕಗಳಿಗೆ ಸಂಬಂಧಿಸಿದಂತೆ 57 ಲಕ್ಷಕ್ಕೂ ಅಧಿಕ ಇಂಧನ ಉಳಿತಾಯ ಪ್ರಮಾಣ ಪತ್ರಗಳನ್ನು ನೀಡಲಾಗಿದೆ ಎಂದು ತಿಳಿಸಿದ್ದಾರೆ. ನಿಗದಿತ ಗುರಿಗಿಂತ ಹೆಚ್ಚು ಇಂಧನ ಶಕ್ತಿ ಉಳಿತಾಯ ಮಾಡಿರುವ ಹಿನ್ನೆಲೆಯಲ್ಲಿ ಈ ಪ್ರಮಾಣಪತ್ರಗಳನ್ನು ವಿತರಿಸಲಾಗಿದೆ ಎಂದು ಹೇಳಿದ್ದಾರೆ.
ದೇಶದ ಪ್ರಮುಖ ಕೈಗಾರಿಕಾ ವಲಯಗಳ ಇಂಧನ ದಕ್ಷತೆ ಹೆಚ್ಚಿಸಲು ಸಚಿವಾಲಯವು ಹಲವು ಉಪಕ್ರಮಗಳನ್ನು ಕೈಗೊಂಡಿದ್ದು, ಅವುಗಳ ದಕ್ಷತೆ ಗುರುತಿಸಿ ಪ್ರಮಾಣ ಪತ್ರ ವಿತರಣೆ ಮಾಡಲಾಗಿದೆ ಎಂದು ಹೇಳಿದ್ದಾರೆ. ಪಳೆಯುಳಿಕೆ ಇಂಧನಗಳ ಬಳಕೆ, ಕಲ್ಲಿದ್ದಲು, ತೈಲ, ಇಂಧನಗಳ ಬಳಕೆ ಕಡಿಮೆ ಮಾಡುವುದು ಇದರ ಉದ್ದೇಶವಾಗಿದೆ. ದೇಶದ ಇಂಧನ ಭದ್ರತೆ ಹೆಚ್ಚಿಸುವ ನಿಟ್ಟಿನಲ್ಲಿ ಈ ಉಪಕ್ರಮ ಮಹತ್ವ ಪಡೆದಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಭಾರತ ಸರ್ಕಾರವು ಇಂಧನ ಸಂರಕ್ಷಣಾ ಕಾಯ್ದೆ 2001 ರ ಅಡಿಯಲ್ಲಿ, 2002 ಮಾರ್ಚ್ ತಿಂಗಳಲ್ಲಿ ಇಂಧನ ದಕ್ಷತೆ ಬ್ಯೂರೋ ಆರಂಭಿಸಿದೆ. ಈ ಬ್ಯೂರೋ ಮೂಲಕ ಇಂಧನ ಉಳಿತಾಯ ಪ್ರಮಾಣಪತ್ರಗಳನ್ನು ನೀಡಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.