ಬೆಂಗಳೂರು: ಆಗಸ್ಟ್ 29 ರಂದು ನಮ್ಮ ಮೆಟ್ರೋದ ಮೈಸೂರು ರಸ್ತೆ – ಕೆಂಗೇರಿ ವಿಸ್ತರಿತ ಮಾರ್ಗಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಚಾಲನೆ ನೀಡಲಿದ್ದಾರೆ.
ಆ. 29 ಭಾನುವಾರದಂದು ಮಧ್ಯಾಹ್ನ 12 ಗಂಟೆಗೆ ಈ ಕಾರ್ಯಕ್ರಮ ನಡೆಯಲಿದೆ. ಈ ಮಾರ್ಗವನು ರೈಲ್ವೆ ಸುರಕ್ಷತಾ ಆಯುಕ್ತರು ಪರಿಶೀಲಿಸಿದ್ದು, ವಾಣಿಜ್ಯ ಸಂಚಾರಕ್ಕೆ ಸಮ್ಮತಿ ಸೂಚಿಸಿದ್ದಾರೆ.
ಮೈಸೂರು ರಸ್ತೆ – ಕೆಂಗೇರಿ ತನಕ ಮೆಟ್ರೋ ಕಾಮಗಾರಿ ಸಂಪೂರ್ಣವಾಗಿದ್ದು, ಈ ಮಾರ್ಗದಲ್ಲಿ ಮೆಟ್ರೋ ರೈಲು ಸಂಚಾರ ಆರಂಭಿಸುವುದರಿಂದ 75 ಸಾವಿರಕ್ಕೂ ಅಧಿಕ ಜನರಿಗೆ ಅನುಕೂಲವಾಗಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.