ನವದೆಹಲಿ: ವಿತ್ತೀಯ ಕೊರತೆ ನೀಗಿಸುವ ನಿಟ್ಟಿನಲ್ಲಿ ಮೂಲಸೌಕರ್ಯ ಆಸ್ತಿ ನಗದೀಕರಣಕ್ಕೆ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.
ಈ ಸಂಬಂಧ ನೀತಿ ಆಯೋಗದ ಸಿಇಒ ಅಮಿತಾಬ್ ಕಾಂತ್ ಮಾತನಾಡಿದ್ದು, ಆರು ಲಕ್ಷ ಕೋಟಿ ರೂ. ಆಸ್ತಿ ನಗದೀಕರಣಕ್ಕೆ ಕೇಂದ್ರ ಸರ್ಕಾರ ನಿರ್ಣಯ ಕೈಗೊಂಡಿದೆ. ದೇಶದಲ್ಲಿ ವಿತ್ತೀಯ ಕೊರತೆ ನೀಗಿಸುವ ನಿಟ್ಟಿನಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಈ ಆಸ್ತಿಯ ಮಾಲೀಕತ್ವ ಸರ್ಕಾರದ ಕೈಯಲ್ಲೇ ಇರಲಿದ್ದು, ಅವಧಿ ಪೂರ್ಣವಾದ ಬಳಿಕ ಸರ್ಕಾರಕ್ಕೆ ಆಸ್ತಿ ಹಿಂದಿರುಗಿಸಬೇಕಾಗುತ್ತದೆ. ಬಿಡ್ಡಿಂಗ್ ಮೂಲಕ ಆಸ್ತಿ ಮಾರಾಟ ಪ್ರಕ್ರಿಯೆ ನಡೆಯಲಿದೆ ಎಂದು ಅವರು ಹೇಳಿದ್ದಾರೆ.
2022 – 25 ರ ಅವಧಿಯಲ್ಲಿ ಆಸ್ತಿಗಳ ಮಾರಾಟ. ಮಾಡಲಾಗುತ್ತದೆ. ಇದರಲ್ಲಿ ಖಾಸಗಿ ವಲಯಗಳ ಭಾಗವಹಿಸುವಿಕೆಗೂ ಅವಕಾಶ ಕಲ್ಪಿಸಲಾಗಿದೆ. ರಾಜ್ಯಗಳು ಸಹ ಈ ಪ್ರಕ್ರಿಯೆಯಲ್ಲಿ ಭಾಗವಹಿಸಲಿವೆ ಎಂದು ಕೇಂದ್ರ ಸರ್ಕಾರದ ಮೂಲಗಳು ಹೇಳಿವೆ. ಈ ಪ್ರಕ್ರಿಯೆಯಲ್ಲಿ. ಆಸ್ತಿಯ ಮಾಲಿಕತ್ವ ಸರ್ಕಾರದ ಕೈಯಲ್ಲಿಯೇ ಇರಲಿದೆ. ಬಳಕೆಯಾಗದ ಆಸ್ತಿಗಳನ್ನು ನಗದೀಕರಣದ ಮೂಲಕ ಬಳಸಲಾಗುತ್ತದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.