ನವದೆಹಲಿ: ತಾಲೀಬಾನ್ ಉಗ್ರರ ವಶವಾಗಿರುವ ಅಫ್ಘಾನಿಸ್ಥಾನದ ಬಿಕ್ಕಟ್ಟಿನ ಬಗ್ಗೆ ಚರ್ಚೆ ನಡೆಸಲು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಆಗಸ್ಟ್ 26 ರಂದು ಬೆಳಗ್ಗೆ 11 ಗಂಟೆಗೆ ಸರ್ವಪಕ್ಷ ಸಭೆ ಕರೆದಿದೆ.
ಅಫ್ಘಾನಿಸ್ಥಾನದ ಪ್ರಸ್ತುತ ಪರಿಸ್ಥಿತಿ, ಅಲ್ಲಿನ ಬೆಳವಣಿಗೆಗೆ ಸಂಬಂಧಿಸಿದಂತೆ ಈ ಸಭೆಯಲ್ಲಿ ಎಲ್ಲಾ ಪಕ್ಷದ ನಾಯಕರ ಜೊತೆಗೆ ಸಭೆ ನಡೆಸಲಾಗುವುದು. ಕಳೆದ ವಾರವಷ್ಟೇ ತಾಲೀಬಾನ್ ಉಗ್ರಗಾಮಿಗಳು ಅಫ್ಘಾನಿಸ್ಥಾನವನ್ನು ತಮ್ಮ ಸುಪರ್ದಿಗೆ ವಹಿಸಿಕೊಂಡಿದ್ದರು. ಆ ಬಳಿಕ ಅಫ್ಘಾನ್ನ ಚಿತ್ರಣವೇ ಬದಲಾಗಿದೆ.
ಈ ಸಂದರ್ಭದಲ್ಲಿ ಅಫ್ಘಾನಿಸ್ಥಾನದಲ್ಲಿ ಸಿಲುಕಿದ್ದ ಭಾರತೀಯರ ಸುರಕ್ಷಿತ ಸ್ಥಳಾಂತರ, ರಕ್ಷಣಾ ಕಾರ್ಯಾಚರಣೆಯನ್ನು ಸಹ ಕೇಂದ್ರ ಸರ್ಕಾರ ಮಾಡುತ್ತಿದೆ. ಅಫ್ಘಾನಿಸ್ಥಾನದಲ್ಲಿ ಅಲ್ಪಸಂಖ್ಯಾತರಾಗಿರುವ ಹಿಂದು, ಸಿಖ್ಖರ ರಕ್ಷಣೆಗೆ ಭಾರತ ಸಿದ್ಧ ಎಂಬುದಾಗಿಯೂ ಈ ಹಿಂದೆಯೇ ಕೇಂದ್ರ ಸರ್ಕಾರ ಭರವಸೆ ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.