ನವದೆಹಲಿ: ತಾಲೀಬಾನ್ ಉಗ್ರರ ವಶದಲ್ಲಿರುವ ಅಫ್ಘಾನಿಸ್ಥಾನದಲ್ಲಿರುವ ಭಾರತೀಯ ನಾಗರಿಕರು, ಅಫ್ಘಾನಿಸ್ಥಾನದ ಸಿಖ್ಖರು, ಹಿಂದೂಗಳನ್ನು ಸ್ಥಳಾಂತರ ಮಾಡುವ ಭಾರತದ ಕಾರ್ಯಾಚರಣೆಗೆ ‘ಆಪರೇಷನ್ ದೇವಿಶಕ್ತಿ’ ಎಂದು ಹೆಸರಿಡಲಾಗಿದೆ.
ಈ ಸಂಬಂಧ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಅವರು ಹೇಳಿದ್ದು, ಇಂದು ಭಾರತಕ್ಕೆ ಅಫ್ಘಾನಿಸ್ಥಾನದಲ್ಲಿದ್ದ 78 ಸಂತ್ರಸ್ತರನ್ನು ಸುರಕ್ಷಿತವಾಗಿ ಸ್ಥಳಾಂತರ ಮಾಡಲಾಗಿದೆ. ಈ ಕಾರ್ಯಾಚರಣೆಗೆ ಆಪರೇಷನ್ ದೇವೀ ಶಕ್ತಿ ಎಂದು ಹೆಸರಿಡಲಾಗಿದೆ ಎಂದು ತಿಳಿಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಭಾರತೀಯ ವಾಯುಪಡೆ, ಏರ್ ಇಂಡಿಯಾ, ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಸಿಬ್ಬಂದಿಗಳಿಗೆ ಅಭಿನಂದನೆಗಳು ಎಂದು ತಿಳಿಸಿದ್ದಾರೆ.
ಆ. 16 ರಿಂದ ತೊಡಗಿದಂತೆ ಭಾರತವು ತಾಲೀಬಾನ್ ಹಿಡಿತದಲ್ಲಿರುವ ಅಫ್ಘಾನಿಸ್ಥಾನದಿಂದ ಭಾರತೀಯ ನಾಗರಿಕರನ್ನು ಏರ್ಲಿಫ್ಟ್ ಮೂಲಕ ರಕ್ಷಣೆ ಮಾಡುವ ಕಾರ್ಯಾಚರಣೆ ನಡೆಸುತ್ತಿದೆ. ಈ ವರೆಗೆ 800 ಕ್ಕೂ ಹೆಚ್ಚು ಜನರ ಸುರಕ್ಷಿತ ಸ್ಥಳಾಂತರ ಕಾರ್ಯ ನಡೆದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.