ಬೆಂಗಳೂರು: ಕೊರೋನಾ ಸೋಂಕಿನ ಹಿಡಿತದಿಂದ ರಕ್ಷಣೆಗಾಗಿ ದೇಶದಲ್ಲಿ ಲಸಿಕಾ ಅಭಿಯಾನ ದೊಡ್ಡ ಮಟ್ಟದಲ್ಲಿ ನಡೆಯುತ್ತಿದೆ. ರಾಜ್ಯದಲ್ಲಿಯೂ ದೊಡ್ಡ ಪ್ರಮಾಣದಲ್ಲಿ ಲಸಿಕಾ ಅಭಿಯಾನ ನಡೆಯುತ್ತಿದ್ದು, ಬೆಂಗಳೂರಿಗೆ ಸಂಬಂಧಿಸಿದಂತೆ ಈಗಾಗಲೇ 1 ಕೋಟಿ ಜನರಿಗೆ ಕೊರೋನಾ ಲಸಿಕೆ ನೀಡಲಾಗಿದೆ ಎಂದು ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಸುಧಾಕರ್, ಬೆಂಗಳೂರು ಬುಧವಾರ 1 ಕೋಟಿ ಡೋಸ್ ಕೊರೋನಾ ಲಸಿಕೆ ವಿತರಣೆಯನ್ನು ಪೂರೈಸಿದೆ. ಲಸಿಕಾ ಅಭಿಯಾನದ ಯಶಸ್ಸಿಗೆ ಶ್ರಮಿಸುತ್ತಿರುವ ಎಲ್ಲರಿಗೂ ಅಭಿನಂದನೆಗಳು ಎಂದು ತಿಳಿಸಿದ್ದಾರೆ.
Bengaluru crossed 1 crore doses of Covid-19 vaccine on Wednesday. A big applause to all those in involved in this #LargestVaccinationDrive.
ಬೆಂಗಳೂರು ಬುಧವಾರ 1 ಕೋಟಿ ಡೋಸ್ ಕೊರೊನಾ ಲಸಿಕೆ ವಿತರಣೆ ಪೂರೈಸಿತು. ಲಸಿಕಾ ಅಭಿಯಾನದ ಯಶಸ್ಸಿಗೆ ಶ್ರಮಿಸುತ್ತಿರುವ ಎಲ್ಲರಿಗೂ ಅಭಿನಂದನೆಗಳು.#IndiaFightsCorona pic.twitter.com/SxFbx292oP
— Dr Sudhakar K (@mla_sudhakar) August 26, 2021
ರಾಜ್ಯದಲ್ಲಿ ಕೊರೋನಾ ಸೋಂಕು ನಿಯಂತ್ರಣ ಹಿನ್ನೆಲೆಯಲ್ಲಿ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದ್ದು, ಮುಂದಿನ ತಿಂಗಳಿನಿಂದ 5 ಲಕ್ಷ ಜನರಿಗೆ ಲಸಿಕೆ ನೀಡುವ ಗುರಿಯನ್ನು ಸಹ ಇರಿಸಿಕೊಂಡಿದೆ. ಈ ಗುರಿಯನ್ನು ಸಾಧಿಸುವ ನಿಟ್ಟಿನಲ್ಲಿ ಹೆಚ್ಚುವರಿ ಲಸಿಕೆ ಪೂರೈಕೆ ಮಾಡುವಂತೆಯೂ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಂಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.