ಬೆಂಗಳೂರು: ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿನ ಜನರಿಗೆ ಕೊರೋನಾ ಲಸಿಕೆ ಒದಗಿಸಲು ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ವೋಲ್ವೋ ಮತ್ತು ನಾರಾಯಣ ಹೃದಯಾಲಯ ಆಸ್ಪತ್ರೆಗಳು ಅಭಿವೃದ್ಧಿ ಮಾಡಿರುವ ಮೊಬೈಲ್ ಲಸಿಕಾ ಬಸ್ಸುಗಳು ಕಾರ್ಯಾರಂಭ ಮಾಡಿವೆ.
ಈ ಬಗ್ಗೆ ನಾರಾಯಣ ಹೃದಯಾಲಯದ ನಿರ್ದೇಶಕ, ಮುಖ್ಯ ವೈದ್ಯ ಡಾ. ದೇವಿ ಶೆಟ್ಟಿ ಮಾತನಾಡಿದ್ದು, ಗ್ರಾಮೀಣ ಭಾಗದ ಜನರಿಗೆ ಕೊರೋನಾ ಲಸಿಕೆ ಒದಗಿಸುವುದು ಬಹುದೊಡ್ಡ ಸವಾಲಿನ ಕೆಲಸವಾಗಿದೆ. ನಗರಗಳಿಗೆ ಬಂದು ಲಸಿಕೆ ಪಡೆಯುವುದು ಸಹ ಗ್ರಾಮೀಣ ಭಾಗದ ಜನರಿಗೆ ಸುಲಭವಲ್ಲ. ಈ ಹಿನ್ನೆಲೆಯಲ್ಲಿ ಮೊಬೈಲ್ ಲಸಿಕಾ ಬಸ್ಸುಗಳನ್ನು ಆರಂಭಿಸಲಾಗಿದೆ. ಗ್ರಾಮೀಣ ಭಾಗದ ಜನರಿಗೆ ಇದರಿಂದ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.
ಗ್ರಾಮೀಣ ಪ್ರದೇಶದ ಜನರಿರುವಲ್ಲಿಗೆ ತೆರಳಿ ಅವರಿಗೆ ಲಸಿಕೆ.ಒದಗಿಸುವುದು ನಮ್ಮ ಮುಖ್ಯ ಗುರಿಯಾಗಿದೆ. ಈ ನಿಟ್ಟಿನಲ್ಲಿ ಲಸಿಕಾ ಬಸ್ಸುಗಳು ಕಾರ್ಯನಿರ್ವಹಿಸಲಿವೆ. ಈ ಬಸ್ಸುಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನ, ವೈದ್ಯಕೀಯ ಸೌಲಭ್ಯಗಳು ಇವೆ ಎಂದು ಅವರು ತಿಳಿಸಿದ್ದಾರೆ ಈ ವಾಹನಗಳಲ್ಲಿ ವೈದ್ಯರು, ದಾದಿಯರು ಸಹ ಸೇವೆ ನೀಡಲಿದ್ದಾರೆ. ಗ್ರಾಮೀಣ ಭಾಗದಲ್ಲಿ ಈ ಬಸ್ಸುಗಳು ಉಚಿತವಾಗಿ ಲಸಿಕೆ ಒದಗಿಸುತ್ತವೆ ಎಂದು ಅವರು ನುಡಿದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.