ಬೆಂಗಳೂರು: ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಕೊರೋನಾ ಪರೀಕ್ಷೆ ಏರಿಕೆ ಮಾಡಲು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಆಡಳಿತ ಮಂಡಳಿಗಳಿಗೆ ರಾಷ್ಟ್ರೀಯ ಆರೋಗ್ಯ ಆಯೋಗ ಸೂಚಿಸಿದೆ.
ಎಲ್ಲಾ ಜಿಲ್ಲೆಗಳಲ್ಲಿಯೂ 70% ಆರ್ಟಿಪಿಸಿಆರ್, 30% ರ್ಯಾಪಿಡ್ ಆ್ಯಂಟಿಜೆನಿಕ್ ಟೆಸ್ಟ್ ನಡೆಸಬೇಕು. ತಾಲೂಕು ಕೇಂದ್ರಗಳ ಹೊರಗೆ ಹೆಚ್ಚು ಪ್ರಮಾಣದಲ್ಲಿ ಪರೀಕ್ಷೆಗಳು ನಡೆಯಬೇಕು ಎಂದು ಆಯೋಗ ತಿಳಿಸಿದೆ.
10% ಪರೀಕ್ಷೆ ಮಕ್ಕಳಿಗೆ ನಡೆಯಬೇಕು. 15 – 18 ವರ್ಷದೊಳಗಿನ ಮಕ್ಕಳಲ್ಲಿ ಸೋಂಕಿನ ಲಕ್ಷಣಗಳಿದ್ದಲ್ಲಿ ರ್ಯಾಪಿಡ್ ಆ್ಯಂಟಿಜೆನಿಕ್ ಟೆಸ್ಟ್ ನಡೆಸಬೇಕು. ಪಾಸಿಟಿವಿಟಿ ಧರ 5% ಗಿಂತ ಹೆಚ್ಚಿದ್ದ ಕಡೆಗಳಲ್ಲಿ ಅವರ ಸಂಪರ್ಕಕ್ಕೆ ಬಂದವರ ಮೇಲೆಯೂ ಗಮನ ಹರಿಸುವಂತೆ ಆಯೋಗ ತಿಳಿಸಿದೆ. ಅವರನ್ನು ಪರೀಕ್ಷೆಗೆ ಒಳಪಡಿಸುವಂತೆಯೂ ಆಯೋಗ ಸೂಚಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.