ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಮೂರನೇ ಅಲೆಯ ಆತಂಕವಿದ್ದು, ಈ ಹಿನ್ನೆಲೆಯಲ್ಲಿ ಪ್ರತಿ ತಾಲೂಕು ಆರೋಗ್ಯ ಕೇಂದ್ರಗಳಲ್ಲಿ ಕನಿಷ್ಠ 5 ಮಕ್ಕಳಿಗಾಗಿ ಬಳಕೆ ಮಾಡಬಹುದಾದ ಐಸಿಯು ಹಾಸಿಗೆಗಳ ವ್ಯವಸ್ಥೆ ಮಾಡಲಾಗಿದೆ ಎಂದು ಸಚಿವ ಜೆ. ಸಿ. ಮಾಧುಸ್ವಾಮಿ ತಿಳಿಸಿದ್ದಾರೆ.
ಅವರು ತುಮಕೂರಿನಲ್ಲಿ ನಡೆದ ರಾಜ್ಯ ಕುಂಚಟಿಗರ ಸಂಘದ ಮಹಿಳಾ ಘಟಕದಿಂದ ಆಯೋಜಿಸಲಾಗಿದ್ದ ‘ಕೊರೋನಾ ಸೇನಾನಿಗಳಿಗೆ ಸನ್ಮಾನ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ರಾಜ್ಯದಲ್ಲಿ ವೈದ್ಯಕೀಯ ಸಿಬ್ಬಂದಿ, ಸ್ವಯಂಸೇವಕರು, ಉದ್ದಿಮೆದಾರರು ಸೇರಿದಂತೆ ಇನ್ನೂ ಹಲವಾರು ಸಮುದಾಯ, ಸಂಘಟನೆಗಳ ಸಹಕಾರದಿಂದ ಕೊರೋನಾ ಸೋಂಕನ್ನು ಯಶಸ್ವಿಯಾಗಿ ಎದುರಿಸಲು ಸಾಧ್ಯವಾಗಿದೆ ಎಂದು ಹೇಳಿದ್ದಾರೆ. ಕೊರೋನಾ ಮೂರನೇ ಅಲೆಯು ಮಕ್ಕಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆ ಇದ್ದು, ಈ ನಿಟ್ಟಿನಲ್ಲಿ ತಜ್ಞ ವೈದ್ಯರಿಗೆ ಮಕ್ಕಳ ಚಿಕಿತ್ಸೆಗೆ ಸಂಬಂಧಿಸಿದಂತೆ ತರಬೇತಿ ನೀಡಲಾಗಿದೆ ಎಂದು ಹೇಳಿದ್ದಾರೆ.
ಹಾಗೆಯೇ ಕೊರೋನಾ ಎರಡನೇ ಅಲೆಯ ಸಂದರ್ಭದಲ್ಲಿ ಆಕ್ಸಿಜನ್ ಕೊರತೆ ಎದುರಾಗಿತ್ತು. ಈ ಕೊರತೆಯನ್ನು ನಿವಾರಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ. ವೈದ್ಯಕೀಯ ಸಿಬ್ಬಂದಿಗಳ ನಿಸ್ವಾರ್ಥ ಸೇವೆಯಿಂದ ನಾವು ಎಲ್ಲಾ ರೀತಿಯ ಪರಿಸ್ಥಿತಿಗಳನ್ನು ಸಮರ್ಥವಾಗಿ ಎದುರಿಸಿದ್ದೇವೆ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.