ನವದೆಹಲಿ: ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರ ಸರ್ಕಾರ 2032 ರ ಒಲಿಂಪಿಕ್ಸ್ ವರೆಗೆ ಭಾರತೀಯ ಕುಸ್ತಿ ಕ್ರೀಡೆಯನ್ನು ದತ್ತು ಸ್ವೀಕರಿಸಲಿದೆ ಎಂದು ಭಾರತದ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ತಿಳಿಸಿದ್ದಾರೆ.
ಈ ಕ್ರೀಡೆಗೆ ಸಂಬಂಧಿಸಿದಂತೆ ಕ್ರೀಡಾಪಟುಗಳಿಗೆ ಮೂಲಸೌಕರ್ಯ ಮತ್ತು ಬೆಂಬಲ ಒದಗಿಸುವ ನಿಟ್ಟಿನಲ್ಲಿ 170 ಕೋಟಿ ರೂ. ಗಳನ್ನು ಹೂಡಿಕೆ ಮಾಡುವ ನಿರೀಕ್ಷೆ ಇರುವುದಾಗಿಯೂ ಅವರು ಹೇಳಿದ್ದಾರೆ. ಹಾಗೆಯೇ ಹಾಕಿ ಕ್ರೀಡೆಗೆ ಒಡಿಶಾ ಸರ್ಕಾರ ಡಬ್ಲ್ಯೂಎಫ್ಐಗೆ ಬೆಂಬಲ ಪಡೆದಿದೆ. ಈ ಸ್ಪೂರ್ತಿಯಿಂದ ಉತ್ತರ ಪ್ರದೇಶ ಸರ್ಕಾರವನ್ನು ಬೆಂಬಲಕ್ಕೆ ಸಂಪರ್ಕಿಸಿರುವುದಾಗಿಯೂ ಸಿಂಗ್ ತಿಳಿಸಿದ್ದಾರೆ.
ಸಣ್ಣ ರಾಜ್ಯವಾದ ಒಡಿಶಾ ಹಾಕಿ ಕ್ರೀಡೆಗೆ ಬೆಂಬಲ ನೀಡುತ್ತಿದೆ. ಅದೇ ರೀತಿ ಕುಸ್ತಿಯನ್ನು ದೊಡ್ಡ ರಾಜ್ಯವಾದ ಉತ್ತರ ಪ್ರದೇಶ ಬೆಂಬಲಿಸುವಂತೆ ಸಿಎಂ ಯೋಗಿ ಅವರನ್ನು ಸಂಪರ್ಕಿಸಿ ಮನವಿ ಮಾಡಲಾಗಿದೆ. ಈ ಮನವಿಯನ್ನು ಸಿಎಂ ಯೋಗಿ ಅವರು ಒಪ್ಪಿಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.