ಬೆಂಗಳೂರು: ಅಸಂಘಟಿತ ಕಾರ್ಮಿಕ ವಲಯಕ್ಕೆ ಉದ್ಯೋಗ, ಜೀವನ ಭದ್ರತೆ, ಆರೋಗ್ಯ, ಶಿಕ್ಷಣ ಮೊದಲಾದ ಸೌಲಭ್ಯಗಳನ್ನು ದೊರೆಯುವಂತೆ ಮಾಡುವ ರಾಷ್ಟ್ರೀಯ ಅಸಂಘಟಿತ ಕಾರ್ಮಿಕರ ನೋಂದಣಿ ಪೋರ್ಟಲ್ ಇ-ಶ್ರಮ್ಗೆ ರಾಜ್ಯದಲ್ಲಿ ನಿನ್ನೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ಅಸಂಘಟಿತ ಕಾರ್ಮಿಕರಿಗೆ ಜೀವನ ಭದ್ರತೆ, ಸಮಾನ ವೇತನ ದೊರೆಯುವಂತಾಗಬೇಕು ಎಂದು ಅವರು ಹೇಳಿದರು. ದೇಶಕ್ಕೆ ಸ್ವಾತಂತ್ರ್ಯ ಬಂದ ಇಷ್ಟು ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಅಸಂಘಟಿತ ಕಾರ್ಮಿಕರ ನೋಂದಣಿ ಕಾರ್ಯ ನಡೆಯುತ್ತಿದೆ. ಅವರನ್ನು ಸರ್ಕಾರ ಗುರುತಿಸುತ್ತಿದೆ ಎಂದು ಬೊಮ್ಮಾಯಿ ತಿಳಿಸಿದರು.
ಕೂಲಿ ಕಾರ್ಮಿಕರು, ರೈತ ಕಾರ್ಮಿಕರು ಸೇರಿದಂತೆ ಯಾವುದೇ ರೀತಿಯ ಕಾರ್ಮಿಕರಿರಲಿ, ಅವರ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯುವಂತೆ ಮಾಡಬೇಕು. ಒಂದು ದೇಶದ ಸಂಪತ್ತನ್ನು ಅಳೆಯಲು ಹಣವಷ್ಟೇ ಮಾನದಂಡವಲ್ಲ. ಅದರ ಜೊತೆಗೆ ಶ್ರಮ, ಭೌತಿಕ ಸೌಲಭ್ಯಗಳು ಸಹ ಅವಶ್ಯ. ಇವುಗಳನ್ನು ಒದಗಿಸುತ್ತಿರುವ ಕಾರ್ಮಿಕರು ದೇಶದ ಆರ್ಥಿಕತೆಯ ಬುನಾದಿ. ಅಸಂಘಟಿತ ಕಾರ್ಮಿಕ ವಲಯ ಭದ್ರವಾಗಿದ್ದರೆ, ದೇಶದ ಆರ್ಥಿಕತೆಯೂ ಭದ್ರವಾಗಿರುತ್ತದೆ ಎಂದು ಬೊಮ್ಮಾಯಿ ಹೇಳಿದರು.
ಮುಖ್ಯಮಂತ್ರಿ @BSBommai ರವರು ಇಂದು ರಾಜ್ಯದಲ್ಲಿ, ರಾಷ್ಟ್ರೀಯ ಅಸಂಘಟಿತ ಕಾರ್ಮಿಕರ ನೋಂದಣಿ 'ಇ-ಶ್ರಮ' ಯೋಜನೆಗೆ ಚಾಲನೆ ನೀಡಿದರು. (1/2)#ShramevJayate #EShramPortal @PMOIndia @LabourMinistry @LabourDeptGOK pic.twitter.com/oixu7bdTfk
— CM of Karnataka (@CMofKarnataka) August 27, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.