ಬೆಂಗಳೂರು: ಮೈಸೂರು ಗ್ಯಾಂಗ್ರೇಪ್ಗೆ ಸಂಬಂಧಿಸಿದಂತೆ ಯಶಸ್ವಿಯಾಗಿ ಕಾರ್ಯಾಚರಣೆ ನಡೆಸಿ, ಐವರು ಆರೋಪಿಗಳನ್ನು ಬಂಧಿಸಿದ ಪೊಲೀಸರಿಗೆ ಐದು ಲಕ್ಷ ರೂ. ಬಹುಮಾನ ನೀಡುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು. ಪೊಲೀಸರು ಈ ಪ್ರಕರಣವನ್ನು ಬೇಧಿಸುತ್ತಾರೆ ಎಂಬ ನಂಬಿಕೆ ಇತ್ತು. ಇದೀಗ ಆರೋಪಿಗಳನ್ನು ಬಂಧಿಸಿ, ತಲೆಮರೆಸಿಕೊಳ್ಳುವುದಕ್ಕೆ ಸಾಧ್ಯವೇ ಇಲ್ಲ ಎಂಬ ಸಂದೇಶವನ್ನು ಪೊಲೀಸರು ನೀಡಿದ್ದಾರೆ. ಸಂತ್ರಸ್ತೆ ಇನ್ನೂ ಆಘಾತದಲ್ಲಿದ್ದು, ಈ ಸಂಬಂಧ ಹೇಳಿಕೆ ನೀಡುವಂತೆ ಅವರ ಮನ ಒಲಿಸಲಾಗುವುದು.ಎಂದು ಸಚಿವರು ಹೇಳಿದ್ದಾರೆ.
ಹಾಗೆಯೇ ಮೈಸೂರಿಗೆ ಭೇಟಿ ನೀಡಿದ್ದಾಗ ಯಾವುದೇ ಸಭೆ ನಡೆಸದೇ ಇದ್ದುದರ ಬಗೆಗೂ ಅವರು ಸ್ಪಷ್ಟನೆ ನೀಡಿದ್ದು, ನಾನು ಕೇವಲ ಸಭೆಗಳನ್ನೇ ನಡೆಸುತ್ತಿದ್ದರೆ ಪೊಲೀಸರು ಪ್ರಕರಣದ ತನಿಖೆಯನ್ನು ನಡೆಸುವುದು ಕಷ್ಟವಾಗುತ್ತಿತ್ತು. ಹೀಗಾಗಿ ಪೂರ್ವಯೋಜಿತ ಕಾರ್ಯಕ್ರಮಗಳಲ್ಲಿ ಮಾತ್ರವೇ ಭಾಗವಹಿಸಲಾಯಿತು ಎಂದು ತಿಳಿಸಿದ್ದಾರೆ. ಹಾಗೆಯೇ ಚಾಮುಂಡಿ ಬೆಟ್ಟದಲ್ಲಿ ಭದ್ರತೆ ಹೆಚ್ಚಿಸಲಾಗುವುದು. ಸಂಜೆ 7 ಗಂಟೆಯ ಬಳಿಕ ಹೆಚ್ಚು ಭದ್ರತೆ ಒದಗಿಸಲು ಕ್ರಮ ಕೈಗೊಳ್ಳಲಾಗುವುದು. ಜನರಿಗೆ ಸಮಸ್ಯೆ ಉಂಟಾಗದಂತೆ ಎಚ್ಚರ ವಹಿಸಲಾಗುವುದು ಎಂದು ಅವರು ಹೇಳಿದ್ದಾರೆ.
ಹಾಗೆಯೇ ಇನ್ನು ಮುಂದೆ ಇಂತಹ ಪ್ರಕರಣಗಳು ರಾಜ್ಯದ ಯಾವ ಭಾಗದಲ್ಲೂ ನಡೆಯದಂತೆ ಕಠಿಣ ಕ್ರಮ ವಹಿಸಲಾಗುವುದು. ಇಂತಹ ಹೀನ ಕೃತ್ಯ ಎಸಗುವವರನ್ನು ಹೆಡೆಮುರಿ ಕಟ್ಟಿ ಕಠಿಣ ಶಿಕ್ಷೆ ವಿಧಿಸಲಾಗುವುದು. ರಾಜ್ಯದ ಸರ್ವರ ರಕ್ಷಣೆಗೆ ನಮ್ಮ ಸರ್ಕಾರ ಹಾಗೂ ಪೊಲೀಸ್ ಇಲಾಖೆ ಕಟಿಬದ್ಧವಾಗಿದೆ ಎಂದು ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ.
ಮೈಸೂರಿನ ಹೀನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ, ತಾಂತ್ರಿಕ ಸಾಕ್ಷ್ಯಗಳನ್ನು ಆಧರಿಸಿ ಯಶಸ್ವಿ ಕಾರ್ಯಾಚರಣೆ ಮೂಲಕ ನಮ್ಮ ಪೊಲೀಸರು ಐವರನ್ನು ವಶಕ್ಕೆ ಪಡೆದಿದ್ದಾರೆ. ಇನ್ನೂ ಓರ್ವ ತಲೆ ಮರೆಸಿಕೊಂಡಿದ್ದು, ಶೀಘ್ರದಲ್ಲೇ ಆ ವ್ಯಕ್ತಿಯನ್ನೂ ಬಂಧಿಸಲಿದ್ದೇವೆ. (1/3)@CMofKarnataka
— Araga Jnanendra (@JnanendraAraga) August 28, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.