ನವದೆಹಲಿ: ಕೊರೋನಾ ನಡುವೆಯೂ ದೇಶದಾದ್ಯಂತ ಇಂದು ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ ನಡೆಯುತ್ತಿದ್ದು, ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್, ಪ್ರಧಾನಿ ಮೋದಿ ಸೇರಿದಂತೆ ಇನ್ನಿತರ ಗಣ್ಯರು ಶುಭಾಶಯಗಳನ್ನು ತಿಳಿಸಿದ್ದಾರೆ.
ಪ್ರಧಾನಿ ಮೋದಿ ಅವರು ಅಷ್ಟಮಿ ಪ್ರಯುಕ್ತ ಟ್ವೀಟ್ ಮಾಡಿದ್ದು, ಎಲ್ಲರಿಗೂ ಶ್ರೀಕೃಷ್ಣ ಜನ್ಮಾಷ್ಟಮಿಯ ಶುಭಾಶಯಗಳು ಎಂದು ಹೇಳಿದ್ದಾರೆ.
Greetings to you all on the auspicious occasion of Janmashtami.
आप सभी को जन्माष्टमी की ढेरों शुभकामनाएं।
जय श्रीकृष्ण!— Narendra Modi (@narendramodi) August 30, 2021
ಹಾಗೆಯೇ ಹಬ್ಬಕ್ಕೆ ರಾಷ್ಟ್ರಪತಿಗಳು ಶುಭಕೋರಿ ಟ್ವೀಟ್ ಮಾಡಿದ್ದು, ಜನ್ಮಾಷ್ಟಮಿಯ ಈ ಶುಭ ಸಂದರ್ಭದಲ್ಲಿ ದೇಶದ ಎಲ್ಲಾ ಜನರಿಗೂ ಶುಭಾಶಯಗಳು. ಈ ಹಬ್ಬ ಭಗವಾನ್ ಶ್ರೀಕೃಷ್ಣನ ಜೀವನ ಚರಿತೆ ತಿಳಿದುಕೊಳ್ಳಲು, ಅವನ ಸಂದೇಶಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಲು ಒಂದು ಅವಕಾಶ ಎಂದು ತಿಳಿಸಿದ್ದಾರೆ. ಈ ಹಬ್ಬ ಪ್ರತಿಯೊಬ್ಬರ ಜೀವನದಲ್ಲಿ ಸಂತೋಷ, ಆರೋಗ್ಯ, ಸಮೃದ್ಧಿ ತರಲಿ ಎಂದು ಹಾರೈಸುವುದಾಗಿ ತಿಳಿಸಿದ್ದಾರೆ.
जन्माष्टमी के शुभ अवसर पर सभी देशवासियों को हार्दिक शुभकामनाएं।
यह पर्व भगवान श्री कृष्ण के जीवन-चरित के बारे में जानने और उनके संदेशों के प्रति स्वयं को समर्पित करने का अवसर है।मेरी कामना है कि यह त्योहार सभी के जीवन में सुख, स्वास्थ्य तथा समृद्धि का संचार करे।
— President of India (@rashtrapatibhvn) August 30, 2021
ಇನ್ನು ಈ ಹಬ್ಬದ ಪ್ರಯುಕ್ತ ಶ್ರೀಕೃಷ್ಣ ಜನ್ಮಭೂಮಿ ಮಥುರಾ, ಇಸ್ಕಾನ್ಗಳಲ್ಲಿ ಭಗವಾನ್ ಶ್ರೀಕೃಷ್ಣನಿಗೆ ವಿಶೇಷ ಪೂಜೆ ಪುನಸ್ಕಾರಗಳು ನೆರವೇರುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.