ಮಂಗಳೂರು: ವಿಜ್ಞಾನ ಭಾರತಿ ಎಂಬ ರಾಷ್ಟ್ರೀಯ ಮಟ್ಟದ ವೈಜ್ಞಾನಿಕ ಸಂಸ್ಥೆಯ ಕರ್ನಾಟಕದ ಘಟಕವಾಗಿ ಸ್ವದೇಶಿ ವಿಜ್ಞಾನ ಆಂದೋಲನ ಕರ್ನಾಟಕ ಎಂಬ ನಮ್ಮ ಸಂಸ್ಥೆಯು ರಾಜ್ಯದಲ್ಲಿ 2004 ರಿಂದ ಕಾರ್ಯನಿರತವಾಗಿದೆ.
ವಿಜ್ಞಾನ, ತಂತ್ರಜ್ಞಾನ ಮತ್ತು ಭಾರತೀಯ ಸಂಸ್ಕೃತಿಯನ್ನು ಜನಸಾಮಾನ್ಯರಿಗೆ ಮತ್ತು ವಿಶೇಷವಾಗಿ ವಿದ್ಯಾರ್ಥಿಗಳಿಗೆ ತಲುಪುವಂತೆ ಮಾಡುವುದೇ ನಮ್ಮ ಸಂಸ್ಥೆಯ ಧ್ಯೇಯವಾಗಿದೆ. ಆಧುನಿಕ ವಿಜ್ಞಾನಗಳ ಜೊತೆಗೆ ಪಾರಂಪರಿಕ ವಿಜ್ಞಾನಗಳಾದ ಮನೋ ಅಧ್ಯಾತ್ಮಿಕ, ಸಾಮಾಜಿಕ, ಸಾಂಸ್ಕೃತಿಕ, ಯೋಗ, ವೈದ್ಯಕೀಯ ಪದ್ಧತಿ, ಕಲೆ, ಸಾಹಿತ್ಯ ಮತ್ತು ವಿಜ್ಞಾನಗಳ ಸಮ್ಮಿಳಿತ ಪ್ರಸರಣವೇ ಸ್ವದೇಶಿ ವಿಜ್ಞಾನ ಆಂದೋಳನ – ಕರ್ನಾಟಕದ ಆದ್ಯತೆ.
ಆತ್ಮ ನಿರ್ಭರ ಭಾರತದ ಕಲ್ಪನೆಯೊಂದಿಗೆ ಕರ್ನಾಟಕದ ಏಳಿಗೆಯೇ ಈ ಸಂಸ್ಥೆಯ ಕನಸು, ಇದನ್ನು ನನಸಾಗಿಸುವ ನಿಟ್ಟಿನಲ್ಲಿ ನಮ್ಮ ಸಂಸ್ಥೆಯು ವಿಜ್ಞಾನ, ತಂತ್ರಜ್ಞಾನ ವರ್ಗಾವಣೆ ಮತ್ತು ಸಾಮಾಜಿಕ ಸಬಲೀಕರಣವನ್ನು ಗಮನದಲ್ಲಿರಿಸಿಕೊಂಡು, ಶೈಕ್ಷಣಿಕ, ಸಂಶೋಧನಾ ಮತ್ತು ಇತರ ಸಂಸ್ಥೆಗಳ ಸಹಯೋಗದೊಂದಿಗೆ ಹೊಸ ಯುಗದ ಸೃಷ್ಠಿಯಲ್ಲಿ ಮುಂದಿನ ಹೆಜ್ಜೆ ಇಡುತ್ತಿದೆ.
2021 ರ ಸೆಪ್ಟೆಂಬರ್ 15 ರಿಂದ 17 ರ ವರೆಗೆ ನಮ್ಮ 16 ನೇ ಕನ್ನಡ ವಿಜ್ಞಾನ ಸಮ್ಮೇಳನವನ್ನು ಮಂಗಳೂರು ವಿಶ್ವವಿದ್ಯಾನಿಲಯ, ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡಮಿ, ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಐಟಿ, ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಹಕಾರದೊಂದಿಗೆ ಮಂಗಳ ಗಂಗೋತ್ರಿಯ ಆವರಣದಲ್ಲಿ ಆಯೋಜಿಸಲಾಗುತ್ತಿದೆ.
ಈ ವಿಜ್ಞಾನ ಸಮ್ಮೇಳನದಲ್ಲಿ ವಿದ್ಯಾರ್ಥಿಗಳಿಗಾಗಿ ಪ್ರಬಂಧ ಸ್ಪರ್ಧೆಯನ್ನು ಈ ಕೆಳಗಿನ 2 ವಿಭಾಗಗಳಲ್ಲಿ ಏರ್ಪಡಿಸಲಾಗಿದೆ.
1 ನೇ ವಿಭಾಗ:- 9 ನೇ ತರಗತಿಯಿಂದ 12 ನೇ ತರಗತಿ ವಿದ್ಯಾರ್ಥಿಗಳಿಗೆ.
2 ನೇ ವಿಭಾಗ:- ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ.
ವಿಷಯ: ಜಗತ್ತಿಗೆ ಭಾರತೀಯ ವಿಜ್ಞಾನ ಪರಂಪರೆಯ ಕೊಡುಗೆ
ಎಂಬ ವಿಷಯದಲ್ಲಿ ಕನ್ನಡದಲ್ಲಿ ಪ್ರಬಂಧ ಸ್ಪರ್ಧೆಯು ನಡೆಯಲಿದ್ದು ಪ್ರಬಂಧವು 750 ಪದಗಳಿಗೆ ಮೀರದಂತೆ ಸಾದ್ಯವಿದ್ದಲ್ಲಿ ತಮ್ಮ ಬರವಣಿಗೆಯನ್ನು ಟೈಪ್ ಮಾಡಿಸಿ ಅಥವಾ ಸುಂದರ ಅಕ್ಷರಗಳಲ್ಲಿ ಸ್ಪಷ್ಟವಾಗಿ ಬರೆದು Capt Ganesh Karnik, 8th Floor, Rama Bhavana Complex, Kodiyalbail, Mangaluru -575003 ವಿಳಾಸಕ್ಕೆ ಅಥವಾ captkarnik@gmail.com ಈ ಮೈಲ್ ವಿಳಾಸಕ್ಕೆ ದಿನಾಂಕ 10. ಸೆ. 2021 ರ ಸಂಜೆ 6 ಘಂಟೆಗೆ ಮುಂಚಿತವಾಗಿ ಬರೆದು ಕಳುಹಿಸುವಂತೆ ವಿನಂತಿಸುತ್ತೇವೆ.
ಆಯ್ದ ಪ್ರಬಂಧಗಳಿಗೆ ವಿಜ್ಞಾನ ಸಮ್ಮೇಳನದ ವೇದಿಕೆಯಲ್ಲಿ 2 ವಿಭಾಗಗಳಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನವನ್ನು ನೀಡಿ ಗೌರವಿಸಲಾಗುವುದು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.