ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಹಿನ್ನೆಲೆಯಲ್ಲಿ ಸ್ಥಗಿತವಾಗಿರುವ 6,7 ಮತ್ತು 8 ನೇ ತರಗತಿಗನ್ನು ಸೆ. 6 ರಿಂದ ಮತ್ತೆ ತೆರೆಯಲು ಸರ್ಕಾರ ಅನುಮತಿ ನೀಡಿದೆ.
ಈ ಸಂಬಂಧ ತಜ್ಞರ ಜೊತೆ ಸಭೆ ನಡೆಸಿ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಚಿವ ಆರ್. ಅಶೋಕ್, ಕೊರೋನಾ ಪಾಸಿಟಿವಿಟಿ ದರ 2% ಗಿಂತ ಕಡಿಮೆ ಇರುವ ತಾಲೂಕುಗಳಲ್ಲಿ ಶಾಲಾರಂಭ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಕೊರೋನಾ ಮಾರ್ಗಸೂಚಿಗಳನ್ನು ಅನುಸರಿಸಿಕೊಂಡು ಸೆ. 6 ರಿಂದ ತೊಡಗಿದಂತೆ ಭೌತಿಕ ತರಗತಿಗಳನ್ನು ಆರಂಭ ಮಾಡಲು ಸರ್ಕಾರ ಅನುಮತಿ ನೀಡುತ್ತಿರುವುದಾಗಿ ಅವರು ತಿಳಿಸಿದ್ದಾರೆ. 50% ಹಾಜರಾತಿಯ ಜೊತೆಗೆ, ಒಂದು ದಿನದ ಅಂತರದಲ್ಲಿ ತರಗತಿಗಳು ನಡೆಯಲಿದೆ. ಸೋಮವಾರದಿಂದ ಶುಕ್ರವಾರದ ವರೆಗೆ ತರಗತಿಗಳು ನಡೆಯಲಿವೆ. ಶನಿವಾರ ಮತ್ತು ಭಾನುವಾರ ರಜೆ ಇದ್ದು, ಈ ದಿನದಲ್ಲಿ ಶಾಲೆಯನ್ನು ಸ್ಯಾನಿಟೈಸೇಶನ್ ಪ್ರಕ್ರಿಯೆಗೆ ಒಳಪಡಿಸಲಾಗುವುದು ಎಂದು ಹೇಳಿದ್ದಾರೆ.
ರಾಜ್ಯ ಸರ್ಕಾರ ಕಳೆದ ವಾರ 9 – 12 ನೇ ತರಗತಿಗಳನ್ನು ತೆರೆಯಲು ಅನುಮತಿ ನೀಡಿತ್ತು. ಇದೀಗ 6 – 8 ನೇ.ತರಗತಿಯನ್ನು ಸೆ. 6 ರಿಂದ ಆರಂಭಿಸಲು ಅನುಮೋದನೆ ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.