ಬೆಂಗಳೂರು: ದಿವ್ಯಾಂಗರ ಬಗ್ಗೆ ಅನುಕಂಪ ತೋರುವುದಲ್ಲ. ಬದಲಾಗಿ ಅವರಿಗೆ ಅವಕಾಶಗಳನ್ನು ನೀಡಬೇಕು. ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ದಿವ್ಯಾಂಗರ ಶ್ರೇಯೋಭಿವೃದ್ಧಿಗಾಗಿ ಹಲವು ಯೋಜನೆಗಳನ್ನು ಜಾರಿಗೆ ತರಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಸಂಪುಟ ಸಭೆಯಲ್ಲಿಯೇ ರೈತರ ಮಕ್ಕಳ ಅಭಿವೃದ್ಧಿಗೆ ವಿದ್ಯಾರ್ಥಿ ವೇತನ, ಸಾಮಾಜಿಕ ಭದ್ರತಾ ಯೋಜನೆಗಳಡಿ ಮಾಸಾಶನ ಏರಿಕೆ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಹಾಗೆಯೇ ಮುಂಬರುವ ದಿನಗಳಲ್ಲಿ ದಿವ್ಯಾಂಗರ ಅಭಿವೃದ್ಧಿಗಾಗಿ ವಿವಿಧ ಕಾರ್ಯಕ್ರಮಗಳನ್ನು ಜಾರಿಗೆ ತರಲಾಗುವುದು ಎಂದು ಸೆನ್ಸ್ ಎಸೆನ್ಸ್ ಸಂಸ್ಥೆಯು ವಿ. ಆರ್. ಎಲ್ ಸಂಸ್ಥೆಯ ಸಹಯೋಗದಲ್ಲಿ ಪ್ರಕಟಿಸಿರುವ ‘ಮ್ಯಾಜಿಕ್ ಡಾಟ್ಸ್’ ಎಂಬ ಬ್ರೈಲ್ ಪತ್ರಿಕೆಯನ್ನು ಬಿಡುಗಡೆ ಮಾಡಿದ ಸಂದರ್ಭದಲ್ಲಿ ಬೊಮ್ಮಾಯಿ ಹೇಳಿದ್ದಾರೆ.
ಒಬ್ಬ ಸಶಕ್ತನಿಗೆ ತನ್ನ ದೇಹದ ಅಂಗಾಗಗಳ ಮಹತ್ವದ ಅರಿವಿರಲಾರದು. ದಿವ್ಯಾಂಗರು ದೇವರ ಮಕ್ಕಳು. ಅವರ ಸೇವೆ ಮಾಡುವ ಮೂಲಕ ಅವರಲ್ಲಿ ಮನೋಧೈರ್ಯ ತುಂಬುವಂತೆಯೂ ಸಿಎಂ ಹೇಳಿದ್ದಾರೆ.
ಇದೇ ಸಂದರ್ಭದಲ್ಲಿ ಗಣಿತದಲ್ಲಿ ಅಸಾಧಾರಣ ಪ್ರತಿಭೆ ಪ್ರದರ್ಶಿಸಿದ ದಿವ್ಯಾಂಗ ಪ್ರತಿಭೆ ಬಸವರಾಜ ಉಮ್ರಾಣಿ ಅವರನ್ನು ಮುಖ್ಯಮಂತ್ರಿಗಳು ಹೃತ್ಪೂರ್ವಕವಾಗಿ ಅಭಿನಂದಿಸಿದರು.
ಸೆನ್ಸ್ ಎಸೆನ್ಸ್ ಸಂಸ್ಥೆಯು ವಿ.ಆರ್.ಎಲ್ ಸಂಸ್ಥೆಯ ಸಹಯೋಗದಲ್ಲಿ ಪ್ರಕಟಿಸಿರುವ 'ಮ್ಯಾಜಿಕ್ ಡಾಟ್ಸ್' ಎಂಬ ಬ್ರೈಲ್ ಪತ್ರಿಕೆಯನ್ನು ಮುಖ್ಯಮಂತ್ರಿ @BSBommai ರವರು ಇಂದು ಗೃಹ ಕಚೇರಿ 'ಕೃಷ್ಣಾ'ದಲ್ಲಿ ಬಿಡುಗಡೆ ಮಾಡಿದರು. (1/2) pic.twitter.com/PjoieWkUsb
— CM of Karnataka (@CMofKarnataka) August 30, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.