ನವದೆಹಲಿ: ದೇಶದಲ್ಲಿ ಸ್ವಯಂಸೇವಾ ಸಂಸ್ಥೆಗಳು, ವೃದ್ಧಾಶ್ರಮಗಳು, ಮಾದಕ ವಸ್ತು ವ್ಯಸನ ಮುಕ್ತಿ ಕೇಂದ್ರಗಳ ಹೆಸರಿನಲ್ಲಿ ವಂಚಿಸುತ್ತಿರುವವರಿಗೆ ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ.
ಈ ಸಂಬಂಧ ಕೇಂದ್ರ ಸಚಿವ ಎ. ನಾರಾಯಣ ಸ್ವಾಮಿ ಅವರು ಮಾತನಾಡಿದ್ದು, ದೇಶದಲ್ಲಿ ಸ್ವಯಂಸೇವಾ ಸಂಸ್ಥೆಗಳು, ಮಾದಕ ವ್ಯಸನ ಮುಕ್ತಿ ಕೇಂದ್ರ ಗಳ ಹೆಸರಿನಲ್ಲಿ ಸರ್ಕಾರದಿಂದ ಕೆಲವು ಸಂಸ್ಥೆಗಳು ಹಣ ಪಡೆಯುತ್ತಿವೆ. ಆದರೆ ಅದನ್ನು ಬಳಕೆ ಮಾಡಿ ಸಂಸ್ಥೆಯಲ್ಲಿ ಯಾವುದೇ ರೀತಿಯ ವ್ಯವಸ್ಥೆಗಳನ್ನು ನಿರ್ವಹಿಸುವ ಕೆಲಸ ನಡೆಯುತ್ತಿಲ್ಲ. 15 -20 ಜನರಿರುವ ಕೇಂದ್ರಗಳಿಗೆ 24 ಲಕ್ಷ ರೂ. ಗಳನ್ನು ಕೇಂದ್ರ ಸರ್ಕಾರ ನೀಡುತ್ತಿದೆ. ಆದರೆ ಇದರ ಸದ್ವಿನಿಯೋಗವನ್ನು ಕೆಲವು ಸಂಸ್ಥೆಗಳು ಮಾಡುತ್ತಿಲ್ಲ ಎಂದು ಅವರು ಹೇಳಿದ್ದು, ಹೀಗಾದಲ್ಲಿ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ.
ಸರ್ಕಾರ ನೀಡುವ ದೇಣಿಗೆಯನ್ನು ಕೆಲವು ಸಂಸ್ಥೆಗಳು ದುರುಪಯೋಗ ಮಾಡುವುದು ಗಮನಕ್ಕೆ ಬರುತ್ತಿದೆ. ಕೆಲವು ಸಂಸ್ಥೆಗಳು ಯಾವುದೇ ಸೇವೆ ಒದಗಿಸದೇ ಇದ್ದರೂ, ಹಣ ಪಡೆಯುವ ಬಗೆಗೂ ಮಾಹಿತಿ ಇದೆ. ಹಣ ಪೋಲಾಗದಂತೆ ತಡೆಯಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಈಗಾಗಲೇ ಇಂತಹ ಅಕ್ರಮಗಳಿಗೆ ಕಡಿವಾಣ ಹಾಕಲು ಪೋರ್ಟಲ್ ಒಂದನ್ನು ಆರಂಭಿಸಲಾಗಿದೆ. ಇದರ ಮೂಲಕ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಎಲ್ಲಾ ದಾಖಲೆಗಳನ್ನು ಸಲ್ಲಿಸುವಂತೆಯೂ ಸೂಚಿಸಲಾಗಿದೆ. ಇದರಿಂದ ಸಂಸ್ಥೆಗಳ ಬಗೆಗೆ ಕೇಂದ್ರ ಸರ್ಕಾರಕ್ಕೆ ಸರಿಯಾದ ಚಿತ್ರಣ ದೊರೆಯಲಿದೆ. ಇದರಿಂದ ಅಕ್ರಮಗಳನ್ನು ನಡೆಸುವವರಿಗೆ ಶಿಕ್ಷೆ ನೀಡುವುದು ಸುಲಭವಾಗಲಿದೆ ಎಂದು ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.