ನವದೆಹಲಿ: ವೆಚ್ಚಇಲಾಖೆ, ಹಣಕಾಸು ಸಚಿವಾಲಯವು ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ಅನುದಾನ ನೀಡಲು ಸೋಮವಾರ 25 ರಾಜ್ಯಗಳಿಗೆ ರೂ 13,385.70 ಕೋಟಿಯನ್ನು ಬಿಡುಗಡೆ ಮಾಡಿತು. ಈ ಸಹಾಯ ಧನವು 2021-22 ವರ್ಷದ ಟೈಡ್ ಅನುದಾನದ 1ನೇ ಕಂತಾಗಿದೆ. 15ನೇ ಹಣಕಾಸು ಆಯೋಗದ ಶಿಫಾರಸಿನಂತೆ ಅನುದಾನ ಬಿಡುಗಡೆ ಮಾಡಲಾಗಿದೆ.
ಎರಡು ಪ್ರಮುಖ ಸೇವೆಗಳನ್ನು ಸುಧಾರಿಸಲು ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ (ಆರ್ಎಲ್ಬಿ) ಟೈಡ್ ಅನುದಾನ ಬಿಡುಗಡೆ ಮಾಡಲಾಗಿದೆ (ಎ) ಬಯಲು ಶೌಚ ಮುಕ್ತ (ಒಡಿಎಫ್) ಸ್ಥಿತಿಯ ನೈರ್ಮಲ್ಯ ಮತ್ತು ನಿರ್ವಹಣೆ ಮತ್ತು (ಬಿ) ಕುಡಿಯುವ ನೀರು ಪೂರೈಕೆ, ಮಳೆ ನೀರು ಕೊಯ್ಲು ಮತ್ತು ನೀರಿನ ಮರುಬಳಕೆಗೆ ಸಂಬಂಧಿಸಿದಂತೆ ಈ ಮೊತ್ತ ಬಿಡುಗಡೆ ಮಾಡಲಾಗಿದೆ. ಪಂಚಾಯತ್ ರಾಜ್ ಸಂಸ್ಥೆಗಳಿಗೆ ಹಂಚಿಕೆಯಾದ ಒಟ್ಟು ಅನುದಾನದಲ್ಲಿ, ಶೇಕಡ 60 ‘ಟೈಡ್ ಗ್ರಾಂಟ್’ ಆಗಿದೆ. ಕುಡಿಯುವ ನೀರು ಪೂರೈಕೆ, ಮಳೆನೀರು ಕೊಯ್ಲು ಮತ್ತು ನೈರ್ಮಲ್ಯದಂತಹ ರಾಷ್ಟ್ರೀಯ ಆದ್ಯತೆಗಳಿಗಾಗಿ ಇದನ್ನು ಮೀಸಲಿಡಲಾಗಿದೆ. ಉಳಿದ ಶೇಕಡ 40 ‘ಅನ್ಟೈಡ್ ಗ್ರ್ಯಾಂಟ್’ ಆಗಿದ್ದು ಸಂಬಳ ಪಾವತಿಯನ್ನು ಹೊರತುಪಡಿಸಿ, ನಿರ್ದಿಷ್ಟ ಸ್ಥಳದ ಅಗತ್ಯಗಳಿಗಾಗಿ ಪಂಚಾಯಿತ್ ರಾಜ್ ಸಂಸ್ಥೆಗಳ ನಿರ್ಣಯದಂತೆ ಬಳಸಿಕೊಳ್ಳಬೇಕು.
ಕೇಂದ್ರ ಪ್ರಾಯೋಜಿತ ಯೋಜನೆಗಳ ಅಡಿಯಲ್ಲಿ ನೈರ್ಮಲ್ಯ ಮತ್ತು ಕುಡಿಯುವ ನೀರಿಗಾಗಿ ಕೇಂದ್ರ ಮತ್ತು ರಾಜ್ಯದಿಂದ ಮಂಜೂರಾದ ನಿಧಿಯ ಮೇಲೆ ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ಹೆಚ್ಚುವರಿ ನಿಧಿಯ ಲಭ್ಯತೆಯನ್ನು ಖಾತ್ರಿಪಡಿಸುವುದು ‘ಟೈಡ್ ಗ್ರಾಂಟ್’ಗಳ ಉದ್ದೇಶವಾಗಿದೆ.
ರಾಜ್ಯಗಳು ಕೇಂದ್ರ ಸರ್ಕಾರದಿಂದ ಸ್ವೀಕರಿಸಿದ 10 ಕೆಲಸದ ದಿನಗಳಲ್ಲಿ ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ಅನುದಾನವನ್ನು ವರ್ಗಾಯಿಸಬೇಕಾಗುತ್ತದೆ. 10 ಕೆಲಸದ ದಿನಗಳನ್ನು ಮೀರಿದ ಯಾವುದೇ ವಿಳಂಬಕ್ಕೆ ರಾಜ್ಯ ಸರ್ಕಾರಗಳು ಬಡ್ಡಿಯೊಂದಿಗೆ ಅನುದಾನವನ್ನು ಬಿಡುಗಡೆ ಮಾಡಬೇಕಾಗುತ್ತದೆ.
ಕರ್ನಾಟಕಕ್ಕೆ ಈ ಬಾರಿ 713.1 ಕೋಟಿ ಬಿಡುಗಡೆಯಾಗಿದ್ದು, ಇಲ್ಲಿಯವರೆಗೆ ನಮ್ಮ ರಾಜ್ಯಕ್ಕೆ ರೂ. 1188.50 ಕೋಟಿ ಬಿಡುಗಡೆಯಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.