ನವದೆಹಲಿ: ಉತ್ತರಪ್ರದೇಶದ ಆರ್ಥಿಕತೆ ಮತ್ತು ಉದ್ಯೋಗಕ್ಕೆ ಗಮನಾರ್ಹ ಉತ್ತೇಜನ ನೀಡುವ ಮಹತ್ವದ ಘೋಷಣೆಯನ್ನು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಾಡಿದ್ದಾರೆ, ಮುಂದಿನ ತಲೆಮಾರಿನ ಅತ್ಯಾಧುನಿಕ ಬ್ರಹ್ಮೋಸ್ ಕ್ಷಿಪಣಿಗಳು ಲಕ್ನೋದಲ್ಲಿ ತಯಾರಾಗಲಿದೆ ಎಂದು ತಿಳಿಸಿದ್ದಾರೆ.
ಬ್ರಹ್ಮೋಸ್ ಉತ್ಪಾದನಾ ಸೌಲಭ್ಯವು 5,000 ಕ್ಕಿಂತ ಹೆಚ್ಚು ವ್ಯಕ್ತಿಗಳಿಗೆ ಉದ್ಯೋಗವನ್ನು ಸೃಷ್ಟಿಸುತ್ತದೆ ಎಂಬ ಮಾಹಿತಿಯನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ತನಗೆ ನೀಡಿದ್ದಾರೆ ಎಂದು ರಕ್ಷಣಾ ಸಚಿವರು ತಿಳಿದ್ದಾರೆ.
“ಪತ್ರಿಕೆಗಳ ಮೂಲಕ ಈಗಾಗಲೇ ಈ ಮಾಹಿತಿಯನ್ನು ಜನರು ಪಡೆದಿರಬೇಕು. ಆದರೆ ಇಂದು ನಾನು ಅದನ್ನು ಪುನರುಚ್ಚರಿಸಲು ಬಯಸುತ್ತೇನೆ. ಉತ್ತರ ಪ್ರದೇಶದಲ್ಲಿ ಕ್ಷಿಪಣಿಗಳನ್ನು ತಯಾರಿಸಲಾಗುತ್ತದೆ ಎಂದು ಯಾರೂ ಊಹಿಸಿರಲಿಕ್ಕಿಲ್ಲ. ಆದರೆ ಲಕ್ನೋ ಬಳಿ ಬ್ರಹ್ಮೋಸ್ ಕ್ಷಿಪಣಿಗಳನ್ನು ತಯಾರಿಸಲಾಗುತ್ತದೆ. ಅಂದಾಜು 5,000 ಕ್ಕೂ ಹೆಚ್ಚು ಜನರು ಉದ್ಯೋಗವನ್ನು ಪಡೆಯುತ್ತಾರೆ” ಎಂದಿದ್ದಾರೆ.
ಮಾಧ್ಯಮ ವರದಿಗಳ ಪ್ರಕಾರ, ಬ್ರಹ್ಮೋಸ್ ಏರೋಸ್ಪೇಸ್ನ ಮಹಾನಿರ್ದೇಶಕ ಸುಧೀರ್ ಕುಮಾರ್ ಮಿಶ್ರಾ ಕಳೆದ ವಾರ ಉತ್ತರ ಪ್ರದೇಶದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅವನಿಶ್ ಅವಸ್ಥಿಯಿಂದ ಉತ್ತರ ಪ್ರದೇಶ ರಕ್ಷಣಾ ಕೈಗಾರಿಕಾ ಕಾರಿಡಾರ್ನಲ್ಲಿ 200 ಎಕರೆ ಭೂಮಿಯನ್ನು ನೀಡುವಂತೆ ಲಿಖಿತವಾಗಿ ಕೋರಿದ್ದಾರೆ. ಯೋಜನೆಗೆ ಸಿಎಂ ಅನುಮೋದನೆ ನೀಡಿದ್ದಾರೆ.
“ಲಕ್ನೋದ ಪ್ರತಿಯೊಂದು ಮನೆಯೂ ಶೀಘ್ರದಲ್ಲೇ PNG ಸಂಪರ್ಕಗಳನ್ನು ಹೊಂದಲಿದೆ.
ಲಕ್ನೋದಲ್ಲಿ ಪ್ರತಿ ಮನೆಗೂ ಶೀಘ್ರದಲ್ಲೇ ಪೈಪ್ಡ್ ನ್ಯಾಚುರಲ್ ಗ್ಯಾಸ್ (PNG) ಸಂಪರ್ಕಗಳನ್ನು ಅಳವಡಿಸಲಾಗುತ್ತದೆ” ಎಂದು ಸಿಂಗ್ ಹೇಳಿದ್ದಾರೆ.
ಯುಪಿ ಸಿಎಂ ಆದಿತ್ಯನಾಥ್ ಅವರನ್ನು ರಕ್ಷಣಾ ಸಚಿವರು ಶ್ಲಾಘಿಸಿದ್ದು, ಅವರಿಂದಾಗಿ ಮಾತ್ರ ತನಗೆ ತನ್ನ ಸಂಸತ್ ಕ್ಷೇತ್ರ ಲಕ್ನೋದಲ್ಲಿ ದೊಡ್ಡ ಮಟ್ಟದಲ್ಲಿ ಅಭಿವೃದ್ಧಿ ಯೋಜನೆಗಳನ್ನು ಕೈಗೊಳ್ಳಲು ಸಾಧ್ಯವಾಯಿತು ಎಂದಿದ್ದಾರೆ.
“ಯೋಗಿ ಆದಿತ್ಯನಾಥ್ ಮುಖ್ಯಮಂತ್ರಿಯಾಗದೇ ಇದ್ದಿದ್ದರೆ ನಾನು ಲಕ್ನೋದಲ್ಲಿ ಹೆಚ್ಚು ಕೆಲಸ ಮಾಡಲು ಸಾಧ್ಯವಾಗುತ್ತಿರಲಿಲ್ಲ. ಉಪಮುಖ್ಯಮಂತ್ರಿ ಕೇಶವ ಮೌರ್ಯ ಕೂಡ ನನಗೆ ಸಹಾಯ ಮಾಡಿದ್ದಾರೆ. ಅಭಿವೃದ್ಧಿಯಲ್ಲಿ ಮುಖ್ಯಮಂತ್ರಿ ಅವರ ಆಸಕ್ತಿ ರಾಜ್ಯದ ತ್ವರಿತ ಪ್ರಗತಿಗೆ ಕಾರಣ. ಯೋಗಿ ಆದಿತ್ಯನಾಥರ ನೇತೃತ್ವದಲ್ಲಿ ಉತ್ತರ ಪ್ರದೇಶದಲ್ಲಿ ಅಭಿವೃದ್ಧಿಯ ವೇಗ ಹೆಚ್ಚಾಗಿದೆ” ಎಂದಿದ್ದಾರೆ.
ಕೋವಿಡ್ನಿಂದ ಹೆತ್ತವರನ್ನು ಕಳೆದುಕೊಂಡ ಮಕ್ಕಳನ್ನು ನೋಡಿಕೊಳ್ಳುವ ಸಿಎಂ ಆದಿತ್ಯನಾಥ್ ಅವರ ಬದ್ಧತೆಯನ್ನು ಸಿಂಗ್ ಶ್ಲಾಘಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.