ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮಂಗಳವಾರ ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷ ಚಾರ್ಲ್ಸ್ ಮೈಕೆಲ್ ಅವರು ಜೊತೆಗೆ ದೂರವಾಣಿ ಮೂಲಕ ಅಫ್ಘಾನಿಸ್ಥಾನದಲ್ಲಿ ನಡೆಯುತ್ತಿರುವ ಪರಿಸ್ಥಿತಿಯ ಬಗ್ಗೆ ಚರ್ಚೆ ನಡೆಸಿದರು. ಅಲ್ಲದೇ, ಭಾರತ-ಇಯು ಸಂಬಂಧಗಳನ್ನು ಮತ್ತಷ್ಟು ಬಲಪಡಿಸುವ ಬದ್ಧತೆಯನ್ನು ಪುನರುಚ್ಛರಿಸಿದರು.
“ಅಫ್ಘಾನಿಸ್ಥಾನದಲ್ಲಿ ಉದ್ಭವಿಸುತ್ತಿರುವ ಪರಿಸ್ಥಿತಿಯ ಕುರಿತು ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷರಾ ಚಾರ್ಲ್ಸ್ ಮೈಕೆಲ್ ಜೊತೆ ಮಾತನಾಡಿದೆ. ಭಾರತ-ಇಯು ಸಂಬಂಧಗಳನ್ನು ಹೆಚ್ಚು ಬಲಪಡಿಸುವ ನಮ್ಮ ಬದ್ಧತೆಯನ್ನು ಈ ಸಂದರ್ಭದಲ್ಲಿ ಪುನರುಚ್ಚರಿಸಿದ್ದೇವೆ” ಎಂದು ಮೋದಿ
ಟ್ವಿಟ್ ಮಾಡಿದ್ದಾರೆ.
“ಅಫ್ಘಾನಿಸ್ಥಾನದ ಇತ್ತೀಚಿನ ಬೆಳವಣಿಗೆಗಳು ಮತ್ತು ಪ್ರಾದೇಶಿಕ ಮತ್ತು ಪ್ರಪಂಚದ ಪರಿಣಾಮಗಳ ಕುರಿತು ನಾಯಕರು ಚರ್ಚಿಸಿದ್ದಾರೆ. ಕಾಬುಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭೀಕರ ಭಯೋತ್ಪಾದಕ ದಾಳಿಯನ್ನು ಕಟುವಾಗಿ ಖಂಡಿಸಿದ್ದಾರೆ.
ಸ್ಥಿರ ಮತ್ತು ಸುರಕ್ಷಿತ ಅಫ್ಘಾನಿಸ್ಥಾನದ ಪ್ರಾಮುಖ್ಯತೆಯನ್ನು ಒತ್ತಿ ಹೇಳಿದ್ದಾರೆ ಮತ್ತು ಈ ಸಂದರ್ಭದಲ್ಲಿ ಭಾರತ ಮತ್ತು ಇಯು ವಹಿಸಬಹುದಾದ ಸಂಭಾವ್ಯ ಪಾತ್ರದ ಬಗ್ಗೆ ಚರ್ಚೆ ನಡೆದಿದೆ, “ಎಂದು ಅಧಿಕೃತ ಹೇಳಿಕೆಯಲ್ಲಿ ತಿಳಿಸಲಾಗಿದೆ.
ಉಭಯ ನಾಯಕರು ದ್ವಿಪಕ್ಷೀಯ ಮತ್ತು ಜಾಗತಿಕ ಸಮಸ್ಯೆಗಳ ಬಗ್ಗೆ, ನಿರ್ದಿಷ್ಟವಾಗಿ ಅಫ್ಘಾನಿಸ್ತಾನದ ಪರಿಸ್ಥಿತಿಯ ಬಗ್ಗೆ ಪರಸ್ಪರ ಸಂಪರ್ಕದಲ್ಲಿರಲು ಒಪ್ಪಿಕೊಂಡಿದ್ದಾರೆ ಎಂದಿದೆ.
ಪಿಎಂ ಮೋದಿ ಅವರು ಅಫ್ಘಾನ್ ಪರಿಸ್ಥಿತಿಯ ಬಗ್ಗೆ ನಿಗಾವಹಿಸಲು ಮತ್ತು ಸಿಲುಕಿರುವ ಭಾರತೀಯರನ್ನು ಸ್ಥಳಾಂತರಿಸಲು ತಕ್ಷಣದ ಅಗತ್ಯಗಳನ್ನು ಕೇಂದ್ರೀಕರಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವ ಸಲುವಾಗಿ ವಿದೇಶಾಂಗ ಸಚಿವ ಎಸ್ ಜೈಶಂಕರ್ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರನ್ನು ಒಳಗೊಂಡ ಉನ್ನತ ಮಟ್ಟದ ಗುಂಪನ್ನು ಸ್ಥಾಪಿಸಿದ್ದಾರೆ.
ಅಫ್ಘಾನಿಸ್ತಾನದಲ್ಲಿ ಅಮೆರಿಕ ತನ್ನ ಮಿಲಿಟರಿ ಕಾರ್ಯಾಚರಣೆಯನ್ನು ಅಂತ್ಯಗೊಳಿಸಿದ ಮತ್ತು ತಾಲಿಬಾನ್ ಸಂಪೂರ್ಣ ನಿಯಂತ್ರಣವನ್ನು ವಹಿಸಿಕೊಂಡ ಹಿನ್ನೆಲೆಯಲ್ಲಿ, ಭಾರತವು ಅಲ್ಲಿ ವಿಕಸಿಸುತ್ತಿರುವ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಹೇಳಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.