ನವದೆಹಲಿ: ಅಖಿಲ ಭಾರತೀಯ ಅಖಾಡ ಪರಿಷತ್ (ಎಬಿಎಪಿ) ಅಧ್ಯಕ್ಷ ಮಹಂತ್ ನರೇಂದ್ರ ಗಿರಿ ಅವರು ‘ದೇಶದಲ್ಲಿ ಧಾರ್ಮಿಕ ಮತ್ತು ಸಾಮಾಜಿಕ ರಚನೆ ಸಮತೋಲನವನ್ನು ಕಾಪಾಡಿಕೊಳ್ಳಲು ಜನಸಂಖ್ಯಾ ನಿಯಂತ್ರಣ ಮಸೂದೆಯನ್ನು ತರಬೇಕು ಎಂದು ಕೇಂದ್ರವನ್ನು ಒತ್ತಾಯಿಸಿದ್ದಾರೆ.
“ಮಸೂದೆಯು ಪ್ರತಿ ರಾಜ್ಯಕ್ಕೂ ಅನ್ವಯವಾಗಿರಬೇಕು ಮತ್ತು ಯಾವುದೇ ರಾಜ್ಯ ಸರ್ಕಾರಕ್ಕೆ ಇದನ್ನು ಅಳವಡಿಸದ ಹೊರತು ಬೇರೆ ಆಯ್ಕೆ ಇರಬಾರದು” ಎಂದು ಅಖಾಡ ಪರಿಷತ್ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಮಾಡಿದೆ. ವಿವಿಧ ಸಮುದಾಯಗಳ ನಡುವೆ ನಿರ್ಣಾಯಕ ಸಮತೋಲನವನ್ನು ಕಾಯ್ದುಕೊಳ್ಳಲು ಈ ಮಸೂದೆ ಸಹಾಯ ಮಾಡುತ್ತದೆ ಎಂದು ಎಬಿಎಪಿ ಮುಖ್ಯಸ್ಥರು ಹೇಳಿದ್ದಾರೆ. ಅಲ್ಲದೇ, ಈ ಮಸೂದೆಯನ್ನು ಶೀಘ್ರವಾಗಿ ಕಾನೂನು ಮಾಡಬೇಕು ಎಂದು ಹೇಳಿದ್ದಾರೆ.
ಕೆಲವು ಧರ್ಮಗುರುಗಳು ತಾಲಿಬಾನ್ಗೆ ಬೆಂಬಲವಾಗಿ ಹೇಳಿಕೆಗಳನ್ನು ನೀಡುತ್ತಿರುವ ಬಗ್ಗೆ ಮಾತನಾಡಿದ ಮಹಂತ್, ತಾಲಿಬಾನನ್ನು ಬೆಂಬಲಿಸುವ ನಾಯಕರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.
“ನಮ್ಮ ಮಹಾಕಾವ್ಯ ಮಹಾಭಾರತದಲ್ಲಿ ಉಲ್ಲೇಖಿಸಿರುವಂತೆ ಅಫ್ಘಾನಿಸ್ತಾನದ ಕಂದಹಾರ್ ನಗರವನ್ನು ಹಿಂದೊಮ್ಮೆ ಹಿಂದೂ ರಾಜ ಆಳುತ್ತಿದ್ದ. ಆದರೆ, ಇಂದು ಹಿಂದೂ ಮತ್ತು ಸಿಖ್ ಸಮುದಾಯದ ಜನರು ಭಯದಲ್ಲಿ ಅಫ್ಘಾನಿಸ್ತಾನವನ್ನು ತೊರೆಯುತ್ತಿದ್ದಾರೆ. ಎರಡು ಮುಖ್ಯ ಸಮುದಾಯಗಳ ನಡುವಿನ ಜನಸಂಖ್ಯೆಯ ಸಮತೋಲನವನ್ನು ಕಾಪಾಡದಿದ್ದರೆ ಭಾರತದಲ್ಲಿ ಏನಾಗಬಹುದು ಎಂಬುದಕ್ಕೆ ಒಂದು ಸ್ಪಷ್ಟ ಉದಾಹರಣೆಯಾಗಿದೆ “ಎಂದು ಅವರು ಹೇಳಿದ್ದಾರೆ
ಅಫ್ಘಾನಿಸ್ಥಾನವನ್ನು ತಾಲಿಬಾನ್ ಸ್ವಾಧೀನ ಮಾಡಿಕೊಂಡಿರುವುದನ್ನು ಬೆಂಬಲಿಸುತ್ತಿರುವ ತಮ್ಮ ಸಮುದಾಯದ ಜನರ ವಿರುದ್ಧ ಕ್ರಮ ಕೈಗೊಳ್ಳುವಂತೆ ಅವರು ಮುಸ್ಲಿಂ ಧಾರ್ಮಿಕ ಮುಖಂಡರಿಗೆ ಮನವಿ ಮಾಡಿದ್ದಾರೆ.
ತಾಲಿಬಾನ್ನಂತಹ ಭಯೋತ್ಪಾದಕ ಸಂಘಟನೆಯನ್ನು ಬೆಂಬಲಿಸುವವರನ್ನು ದೇಶದ್ರೋಹಿಗಳೆಂದು ಪರಿಗಣಿಸಬೇಕು ಮತ್ತು ಬಂಧಿಸಬೇಕು ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.