ಬೆಂಗಳೂರು: ನೋ ವ್ಯಾಕ್ಸಿನ್, ನೋ ರೇಷನ್ ಎಂಬ ಸುದ್ದಿ ಸಾರ್ವಜನಿಕವಾಗಿ ಇದೀಗ ಬಾರೀ ಚರ್ಚೆಗೆ ಗ್ರಾಸವಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿ ಕುಮಾರ್ ಅವರು ಪ್ರಕಟಣೆ ಹೊರಡಿಸಿದ್ದಾರೆ.
ಕೊರೋನಾ ಲಸಿಕೆ ಪಡೆಯುವವರಿಗೆ ಮಾತ್ರ ಪಿಂಚಣಿ, ಲಸಿಕೆ ದೊರೆಯುತ್ತದೆ ಎಂಬುದಾಗಿ ಸರ್ಕಾರ ಹೇಳಿಲ್ಲ. ಹಾಗೆಯೇ, ಯಾವುದೇ ನಿರ್ಬಂಧ ಹೇರದೆ, ಜನಜಾಗೃತಿ ಮೂಲಕವೇ ಕೊರೋನಾ ಲಸಿಕೆ ಪಡೆಯುವತ್ತ ಜನರನ್ನು ಸೆಳೆಯುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಂಡಿದೆ. ಈ ಸಂಬಂಧ ಯಾವುದೇ ಯೋಜನೆಗಳ ಜೊತೆಗೆ ಸರ್ಕಾರ ಕೊರೋನಾ ಲಸಿಕಾ ಕಾರ್ಯಕ್ರಮಗಳನ್ನು ಜೋಡಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಹಾಗೆಯೇ ಜಾಗೃತಿ ಅಭಿಯಾನದ ಮೂಲಕವೇ ಕೊರೋನಾ ಲಸಿಕಾ ಕಾರ್ಯಕ್ರಮವನ್ನು ಯಶಸ್ವಿಯಾಗಿ ಪೂರ್ಣಗೊಳಿಸಲು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು, ಆರೋಗ್ಯಾಧಿಕಾರಿಗಳಿಗೆ ನಿರ್ದೇಶಿಸಲಾಗಿದೆ ಎಂದು ತಿಳಿಸಿದ್ದಾರೆ. ಇಂತಹ ಯಾವುದೇ ತಪ್ಪು ನಡವಳಿಕೆಗಳನ್ನು ಘೋಷಿಸಿದ್ದರೆ ಕೂಡಲೇ ಅದನ್ನು ಕೈಬಿಡುವಂತೆಯೂ ಅವರು ಸೂಚಿಸಿದ್ದಾರೆ.
ಸರ್ಕಾರದ ಯಾವುದೇ ಕಾರ್ಯಕ್ರಮ/ಯೋಜನೆಗಳಿಗೆ ಕೋವಿಡ್ ಲಸಿಕಾ ಕಾರ್ಯಕ್ರಮವನ್ನು ಜೋಡಿಸಿಲ್ಲ. ಆದ್ದರಿಂದ ಲಸಿಕೆ ಹಾಕಿಸಿಕೊಳ್ಳಲು ಜನರಿಗೆ ಯಾವುದೇ ನಿರ್ಬಂಧ ಹೇರದೆ, ಲಸಿಕಾ ಅಭಿಯಾನವನ್ನು ಯಶಸ್ವಿಗೊಳಿಸಬೇಕೆಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿಗಳು ನಿರ್ದೇಶಿಸಿದ್ದಾರೆ. @CMofKarnataka pic.twitter.com/9ogxjunEOF
— DIPR Karnataka (@KarnatakaVarthe) September 2, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.