ನವದೆಹಲಿ: ಅಫ್ಘಾನಿಸ್ಥಾನದಲ್ಲಿ ಐಸಿಸ್ ಸಂಬಂಧಿತ 25 ಭಾರತೀಯರ ಪ್ರವೇಶವನ್ನು ತಡೆಯಲು ಭಾರತೀಯ ವಿಮಾನ ನಿಲ್ದಾಣಗಳು ಮತ್ತು ಬಂದರುಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
ತಮಿಳುನಾಡು, ಕೇರಳ, ದೆಹಲಿ ಮತ್ತು ಕರ್ನಾಟಕ ರಾಜ್ಯಗಳಲ್ಲಿ ಸಕ್ರಿಯವಾಗಿರುವ ಅನೇಕ ಐಎಸ್ ಪ್ರೇರಿತ ಮಾಡ್ಯೂಲ್ಗಳ ತನಿಖೆಯ ಸಮಯದಲ್ಲಿ ಇಂತಹ ವ್ಯಕ್ತಿಗಳನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಗುರುತಿಸಿದೆ.
ಈ ಜನರು ಅಫ್ಘಾನಿಸ್ತಾನಕ್ಕೆ ವಲಸೆ ಹೋಗಿ ದೇಶದ ನಂಗರ್ಹಾರ್ ಪ್ರಾಂತ್ಯದಲ್ಲಿ ಐಸಿಸ್ ಸೇರಿಕೊಂಡಿದ್ದಾರೆ ಎನ್ನಲಾಗಿದೆ.
ಆದ್ದರಿಂದ, ಎಲ್ಲಾ 43 ವಿಮಾನ ನಿಲ್ದಾಣಗಳು, ಬಂದರುಗಳು, ಅಂತರರಾಷ್ಟ್ರೀಯ ರೈಲು ಚೆಕ್ ಮತ್ತು ಲ್ಯಾಂಡ್ ಪೋಸ್ಟ್ಗಳಲ್ಲಿ ಈ 25 ವ್ಯಕ್ತಿಗಳು ಇನ್ನೊಂದು ದೇಶದ ಮೂಲಕ ಭಾರತವನ್ನು ಪ್ರವೇಶಿಸಲು ಪ್ರಯತ್ನಿಸಬಹುದು ಎಂಬ ಎಚ್ಚರಿಕೆಯೊಂದಿಗೆ ಕಟ್ಟುನಿಟ್ಟಿನ ಕ್ರಮಗಳನ್ನು ಖಾತ್ರಿಪಡಿಸಲಾಗಿದೆ.
ಎನ್ಐಎಯ ಕೋರಿಕೆಯ ಮೇರೆಗೆ, ಶಂಕಿತರ ವಿರುದ್ಧ ಈಗಾಗಲೇ ರೆಡ್ ಕಾರ್ನರ್ ನೋಟಿಸ್ (RCN) ಹೊರಡಿಸಲಾಗಿದೆ.
ಶಂಕಿತ 25 ವ್ಯಕ್ತಿಗಳಲ್ಲಿ ಕೆಲವರು ಈಗಾಗಲೇ ಸತ್ತಿದ್ದಾರೆ ಎಂದು ಹೇಳಲಾಗುತ್ತಿದೆ.
ಎನ್ಐಎ ಅಧಿಕಾರಿಗಳು ಅಫ್ಘಾನಿಸ್ಥಾನ-ಪಾಕಿಸ್ಥಾನ ಗಡಿಯಿಂದ ಕಾರ್ಯಾಚರಿಸುತ್ತಿರುವ ಮತ್ತು ಇನ್ನೂ ಸಾಮಾಜಿಕ ಮಾಧ್ಯಮದಲ್ಲಿ ಸಕ್ರಿಯವಾಗಿರುವ ಕೆಲವು ಶಂಕಿತರನ್ನು ಗುರುತಿಸಿದ್ದಾರೆ.
ಭಾರತದ ಕೆಲವು ಮಹಿಳೆಯರು ಐಸಿಸ್ ಸೇರಲು ಅಫ್ಘಾನಿಸ್ಥಾನಕ್ಕೆ ಪ್ರಯಾಣ ಬೆಳೆಸಿದ್ದರು ಆದರೆ ಅಫ್ಘಾನಿಸ್ತಾನದ ಮಾಜಿ ಅಧ್ಯಕ್ಷ ಅಶ್ರಫ್ ಘನಿ ನೇತೃತ್ವದ ಹಿಂದಿನ ಸರ್ಕಾರದ ಮುಂದೆ ತಮ್ಮನ್ನು ಶರಣಾಗತರಾಗಿದ್ದರು ಎನ್ನಲಾಗಿದೆ.
ಆದರೆ, ಕೇಂದ್ರ ಗೃಹ ಸಚಿವಾಲಯ ಸಂಗ್ರಹಿಸಿದ ಮಾಹಿತಿಯ ಪ್ರಕಾರ, ತಾಲಿಬಾನ್ ಕಾಬೂಲ್ ಅನ್ನು ಸ್ವಾಧೀನಪಡಿಸಿಕೊಂಡ ನಂತರ ಈ ಮಹಿಳೆಯರನ್ನು ಬಿಡುಗಡೆ ಮಾಡಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.