ದಾವಣಗೆರೆ: ಸಿಎಂ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿಯೇ ಮುಂದಿನ ವಿಧಾನಸಭಾ ಚುನಾವಣೆ ನಡೆಯಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ.
ಈ ಹೇಳಿಕೆಯನ್ನು ನೀಡುವ ಮೂಲಕ ನಾಯಕತ್ವದ ಬಗ್ಗೆ ಎದ್ದಿದ್ದ ಊಹಾಪೋಹಗಳಿಗೆ ಶಾ ತೆರೆ ಎಳೆದಿದ್ದಾರೆ. ಬೊಮ್ಮಾಯಿ ಅವರು ಸಮರ್ಥವಾಗಿ ಕೆಲಸ ಮಾಡುತ್ತಿದ್ದು, ಅವರ ನೇತೃತ್ವದಲ್ಲಿಯೇ ಮುಂದಿನ ವಿಧಾನಸಭಾ ಚುನಾವಣೆಯೂ ನಡೆಯಲಿದೆ ಎಂದು ಅವರು ಹೇಳಿದ್ದಾರೆ.
ಇದೇ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಬಗೆಗೂ ಮಾತನಾಡಿದ ಶಾ, ಅವರನ್ನು ಅಧಿಕಾರದಿಂದ ಇಳಿಸಿದ್ದಲ್ಲ. ಬದಲಾಗಿ ಹೊಸ ನಾಯಕತ್ವಕ್ಕೆ ಅವಕಾಶ ನೀಡುವ ನಿಟ್ಟಿನಲ್ಲಿ ಅವರು ಅಧಿಕಾರಕ್ಕೆ ಸ್ವಯಂಪ್ರೇರಿತರಾಗಿ ರಾಜಿನಾಮೆ ನೀಡಿದ್ದು ಎಂದು ಹೇಳಿದ್ದಾರೆ. ಅವರ ಕಾರ್ಯ ವೈಖರಿಗೆ ಸಂಬಂಧಿಸಿದಂತೆ ರಾಜ್ಯ ನಾಯಕರಲ್ಲಿ ಯಾವುದೇ ರೀತಿಯ ಅಸಮಾಧಾನ ಇಲ್ಲ ಎಂದು ಶಾ ತಿಳಿಸಿದ್ದಾರೆ. ಆ ಮೂಲಕ ರಾಜ್ಯ ಬಿಜೆಪಿಯ ನಾಯಕತ್ವದ ಬಗೆಗೆ ಎದ್ದಿರುವ ಎಲ್ಲಾ ಗೊಂದಲಗಳಿಗೂ ಶಾ ತೆರೆ ಎಳೆಯುವ ಕೆಲಸ ಮಾಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.