ಮೈಸೂರು: ನಾಡಹಬ್ಬ ದಸರಾವನ್ನು ಈ ಬಾರಿಯೂ ಸರಳ ಮತ್ತು ಸಾಂಪ್ರದಾಯಿಕವಾಗಿ ಆಚರಿಸಲು ಸರ್ಕಾರ ನಿರ್ಧರಿಸಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಟಿ. ಸೋಮಶೇಖರ್ ತಿಳಿಸಿದ್ದಾರೆ.
ದಸರಾ ಆಚರಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಮಹತ್ವದ ಸಭೆ ನಡೆಸಿ, ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಅಕ್ಟೋಬರ್ 7 ರಂದು ಬೆಳಗ್ಗೆ 8 ಗಂಟೆಗೆ ನಾಡಹಬ್ಬ ದಸರಾದ ಉದ್ಘಾಟನೆ ನಡೆಯಲಿದೆ. ಯಾರು ಉದ್ಘಾಟಿಸುತ್ತಾರೆ ಎಂಬ ತೀರ್ಮಾನವನ್ನು ಮುಖ್ಯಮಂತ್ರಿಗಳು ತೆಗೆದುಕೊಳ್ಳಲಿದ್ದಾರೆ. ಹಾಗೆಯೇ ಜಂಬೂ ಸವಾರಿಯಲ್ಲಿ 300 ಜನರಿಗೆ ಪಾಲ್ಗೊಳ್ಳಲು ಅವಕಾಶ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಕಳೆದ ವರ್ಷದ ಹಾಗೆಯೇ ಈ ಬಾರಿಯೂ ಜಂಬೂ ಸವಾರಿ ಅರಮನೆಯ ಆವರಣದಲ್ಲಿ ನಡೆಯಲಿದೆ. ಕಾರ್ಯಕ್ರಮಗಳು ವರ್ಚುವಲ್ ವೇದಿಕೆ ಮೂಲಕ ನಡೆಯಲಿದೆ ಎಂದು ಅವರು ಹೇಳಿದ್ದಾರೆ. ನಾಡಹಬ್ಬದ ಪ್ರಮುಖ ಆಕರ್ಷಣೆ ವಿದ್ಯುತ್ ದೀಪಾಲಂಕಾರ ಈ ಬಾರಿಯೂ ಇರಲಿದೆ ಎಂದು ಅವರು ಹೇಳಿದ್ದಾರೆ. ಕಾರ್ಯಕ್ರಮಗಳಿಗೆ ಜನರ ಮಿತಿಯನ್ನು ಸೆ. 15 ರಂದು ತೀರ್ಮಾನಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.
ಮುಖ್ಯಮಂತ್ರಿ @BSBommai ರವರ ಅಧ್ಯಕ್ಷತೆಯಲ್ಲಿ "ನಾಡಹಬ್ಬ ಮೈಸೂರು ದಸರಾ ಮಹೋತ್ಸವ – 2021" ಉನ್ನತ ಮಟ್ಟದ ಸಮಿತಿ ಸಭೆ ಇಂದು ನಡೆಯಿತು. (1/2)#Nadahabba #MysuruDasara #Dasara2021 pic.twitter.com/fKiAUK9Lcw
— CM of Karnataka (@CMofKarnataka) September 3, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.