ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಕೆಲ ಸಮಯದ ಹಿಂದಷ್ಟೇ ನಡೆದ ಚುನಾವಣೆಯ ಬಳಿಕ ನಡೆದ ಹಿಂಸೆಯ ತನಿಖಾ ಜವಾಬ್ದಾರಿಯನ್ನು ಕೋಲ್ಕತ್ತಾ ಹೈಕೋರ್ಟ್ ಕೆಲ ಸಮಯದ ಹಿಂದಷ್ಟೇ ಸಿಬಿಐಗೆ ವಹಿಸಿತ್ತು.
ಈ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಅಧಿಕಾರಿಗಳು ಉತ್ತರ 24 ಪರಗಣ ಜಿಲ್ಲೆಯಲ್ಲಿ ವ್ಯಕ್ತಿಯೋರ್ವನನ್ನು ಬಂಧಿಸಿದೆ.
ಮೇ 2 ರಂದು ಪಶ್ಚಿಮ ಬಂಗಾಳದ ಚುನಾವಣಾ ಫಲಿತಾಂಶ ಘೋಷಣೆಯಾಗಿದೆ. ಆ ಬಳಿಕ ಬಿಜೆಪಿ ಕಾರ್ಯಕರ್ತರೊಬ್ಬರ ತಾಯಿಯ ಹತ್ಯೆ ನಡೆದಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರತನ್ ಹಲ್ದಾರ್ ಎಂಬಾತನನ್ನು ಜಗದಾಲ್ ಪ್ರದೇಶದಲ್ಲಿ ಬಂಧಿಸಲಾಗಿದೆ. ಇದೇ ಹತ್ಯೆಗೆ ಸಂಬಂಧಿಸಿದಂತೆ ಈ ಹಿಂದೆ ಬಿಜೋಯ್ ಘೋಷ್, ಆಸಿಮ್ ಘೋಷ್ ಎಂಬಿಬ್ಬರನ್ನು ಸಹ ಸಿಬಿಐ ಬಂಧಿಸಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.