ನವದೆಹಲಿ: ಕೇಂದ್ರ ಆಯುಷ್ ಸಚಿವಾಲಯವು ದೇಶದ 45 ಕ್ಕೂ ಅಧಿಕ ಸ್ಥಳಗಳಿಂದ ‘ಆಯುಷ್ ಆಪ್ಕೆ ದ್ವಾರ್ʼ ಎಂಬ ಅಭಿಯಾನವನ್ನು ಪ್ರಾರಂಭಿಸಿದೆ.
ಆ ಮೂಲಕ ಮುಂದಿನ ಒಂದು ವರ್ಷದಲ್ಲಿ ದೇಶದ ಸುಮಾರು 75 ಲಕ್ಷ ಮನೆಗಳಿಗೆ ಔಷಧೀಯ ಸಸಿಗಳನ್ನು ವಿತರಣೆ ಮಾಡುವ ಗುರಿಯನ್ನು ಇರಿಸಿಕೊಂಡಿದೆ. ಆಶೋಕ, ಅಶ್ವಗಂಧ, ಲಿಂಬೆ, ತುಳಸಿ, ನೆಲ್ಲಿ, ಸರ್ಪಗಂಧ ಸೇರಿದಂತೆ ಇನ್ನೂ ಹಲವಾರು ವಿಧದ ಔಷಧೀಯ ಸಸ್ಯಗಳನ್ನು ವಿತರಿಸುವ ನಿಟ್ಟಿನಲ್ಲಿ ಸಚಿವಾಲಯವು ಈ ಉಪಕ್ರಮಕ್ಕೆ ಚಾಲನೆ ನೀಡಿದೆ.
ಕೇಂದ್ರ ಸಚಿವ ಡಾ. ಮಹೇಂದ್ರ ಮುಂಜಾಪರ ಅವರು ಔಷಧೀಯ ಸಸ್ಯಗಳನ್ನು ವಿತರಣೆ ಮಾಡುವ ಮೂಲಕ ಈ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಜೊತೆಗೆ ಸಸಿಗಳನ್ನು ಉತ್ತಮ ರೀತಿಯಲ್ಲಿ ಆರೈಕೆ ಮಾಡುವಂತೆಯೂ ಅವರು ತಿಳಿಸಿದ್ದಾರೆ.
ಮುಂಬೈನಿಂದ ಕೇಂದ್ರ ಸಚಿವ ಸರ್ಬಾನಂದ ಸೋನೋವಾಲ್ ಈ ಅಭಿಯಾನಕ್ಕೆ ಚಾಲನೆ ನೀಡಿದರು. ನಾಗರಿಕರಿಗೆ ಔಷಧೀಯ ಸಸ್ಯಗಳನ್ನು ವಿತರಿಸುವ ಮೂಲಕ ಕಾರ್ಯಕ್ರಮವನ್ನು ಆರಂಭಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.