ಅರುಣಾಚಲ ಪ್ರದೇಶ: ರಾಜ್ಯದಲ್ಲಿ ಕೃಷಿಗೆ ಸಂಬಂಧಿಸಿದಂತೆ ಎರಡು ಮಹತ್ವಾಕಾಂಕ್ಷೆಯ ಯೋಜನೆಗಳನ್ನು ಅರುಣಾಚಲ ಪ್ರದೇಶ ಸರ್ಕಾರ ಪ್ರಾರಂಭಿಸಿದೆ.
ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ ‘ಆತ್ಮನಿರ್ಭರ ಕೃಷಿ ಯೋಜನೆ’ ಮತ್ತು ತೋಟಗಾರಿಕೆಗೆ ಸಂಬಂಧಿಸಿದಂತೆ ‘ಆತ್ಮನಿರ್ಭರ ಭಾಗ್ವನಿ ಯೋಜನೆ’ ಎಂಬ ಹೆಸರಿನಲ್ಲಿ ಸರ್ಕಾರ ರೈತರ ಅಭಿವೃದ್ಧಿಗಾಗಿ ಈ ಯೋಜನೆಗಳನ್ನು ಆರಂಭಿಸಿದೆ. ಕಳೆದ ಫೆಬ್ರವರಿ ತಿಂಗಳಲ್ಲಿ ಬಜೆಟ್ ಅಧಿವೇಶನದ ಆತ್ಮನಿರ್ಭರ ಕಾರ್ಯಕ್ರಮದ ಅಡಿಯಲ್ಲಿ ಈ ಯೋಜನೆಗಳನ್ನು ಆರಂಭಿಸಲಾಗಿದೆ. ಪ್ರತಿ ಯೋಜನೆಗೆ ಒಟ್ಟು 120 ಕೋಟಿ ರೂ. ಗಳನ್ನು ಮತ್ತು 60 ಕೋಟಿ ರೂ. ಗಳನ್ನು ಕೃಷಿ ಇಲಾಖೆ ಮತ್ತು ತೋಟಗಾರಿಕಾ ಇಲಾಖೆಗೆ ಹಂಚಿಕೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಇಟಾನಗರದಲ್ಲಿ ಈ ಯೋಜನೆಗಳಿಗೆ ಚಾಲನೆ ನೀಡಿದ ಮುಖ್ಯಮಂತ್ರಿ ಪೆಮಾ ಖಂಡು ಅವರು, ಈ ಯೋಜನೆಗಳು ರಾಜ್ಯದ ರೈತರು ಮತ್ತು ಸ್ವಸಹಾಯ ಗುಂಪುಗಳಿಗೆ ಹೆಚ್ಚಿನ ಅನುಕೂಲ ಒದಗಿಸಿಕೊಡಲಿದೆ ಎಂದು ತಿಳಿಸಿದರು. ಈ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು ತಮ್ಮ ಜಿಲ್ಲೆಯ ಜಿಲ್ಲಾಡಳಿತಗಳನ್ನು ಸಂಪರ್ಕ ಮಾಡುವಂತೆಯೂ ಅವರು ಸೂಚಿಸಿದರು. ಈ ಎರಡೂ ಯೋಜನೆಗಳು ಅನನ್ಯವಾಗಿದ್ದು, ಇವೆರಡೂ ಮುಂಚೂಣಿಯ ಸಬ್ಸಿಡಿಯನ್ನು ಆಧರಿಸಿವೆ ಎಂದು ಅವರು ತಿಳಿಸಿದರು
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.