ಶಿಮ್ಲಾ: ಹಿಮಾಚಲ ಪ್ರದೇಶ ಸರ್ಕಾರವು ವಿವಿಧ ಕೈಗಾರಿಕಾ ಸಂಸ್ಥೆಗಳೊಂದಿಗೆ ಸುಮಾರು 30,000 ಕೋಟಿ ರೂಪಾಯಿ ಮೌಲ್ಯದ 27 ಒಪ್ಪಂದಗಳಿಗೆ ಸಹಿ ಹಾಕಿದ್ದು, ಇದರಿಂದ ಅಲ್ಲಿ ಉದ್ಯೋಗ ಸೃಷ್ಟಿಗೆ ಹೆಚ್ಚಿನ ಉತ್ತೇಜನ ಸಿಗಲಿದೆ.
ಧರ್ಮಶಾಲಾದಲ್ಲಿನ ಕಂಗ್ರಾ ಉಪ ಆಯುಕ್ತ ರಾಕೇಶ್ ಕುಮಾರ್ ಪ್ರಜಾಪತಿ ಅವರು ರಾಜ್ಯ ಸರ್ಕಾರದ ಪರವಾಗಿ ಒಪ್ಪಂದಗಳಿಗೆ ಸಹಿ ಹಾಕಿದರು. ಈ ಸಂದರ್ಭದಲ್ಲಿ ಮಾತನಾಡಿದ ಹಿಮಾಚಲ ಪ್ರದೇಶ ಕೈಗಾರಿಕಾ ಸಚಿವ ಬಿಕ್ರಮ್ ಸಿಂಗ್ ಅವರು ಪಂಜಾಬ್, ಹರಿಯಾಣ, ಉತ್ತರಾಖಂಡ್ ಮತ್ತು ದೆಹಲಿಗಳೊಂದಿಗೆ ಸುಲಲಿತ ಉದ್ಯಮ ಶ್ರೇಯಾಂಕದಲ್ಲಿ ಹಿಮಾಚಲ ಪ್ರದೇಶ ರಾಜ್ಯವು ಮುಂಚೂಣಿಯಲ್ಲಿದೆ ಎಂದು ಪ್ರತಿಪಾದಿಸಿದರು.
“ರಾಜ್ಯ ಸರ್ಕಾರವು ಹೂಡಿಕೆದಾರರಿಗೆ ಕೈಗೆಟುಕುವ ದರದಲ್ಲಿ ಭೂಮಿ, ಉತ್ತಮ ಗುಣಮಟ್ಟದ ಮತ್ತು ವಿಶ್ವಾಸಾರ್ಹ ವಿದ್ಯುತ್ ಪೂರೈಕೆ, ಕ್ರಿಯಾಶೀಲ ಮತ್ತು ಪ್ರವೇಶಿಸಬಹುದಾದ ಆಡಳಿತದಂತಹ ವಿಭಿನ್ನ ಅನುಕೂಲಗಳನ್ನು ನೀಡುತ್ತದೆ. ಕೆಲವು ಹೂಡಿಕೆದಾರರು ಎಥೆನಾಲ್ ಘಟಕಗಳನ್ನು ಸ್ಥಾಪಿಸಲು ಆಸಕ್ತಿ ತೋರಿಸಿದ್ದಾರೆ. ಹಿಮಾಚಲವು ನಲಗಢದಲ್ಲಿ ಅತ್ಯಾಧುನಿಕ ರಕ್ಷಣಾ ಪಾರ್ಕ್ ಹೊಂದಿರುವ ಈ ಭಾಗದ ಏಕೈಕ ರಾಜ್ಯವಾಗಿದೆ” ಎಂದು ಹೇಳಿದರು.
ರಾಜ್ಯ ಸರ್ಕಾರದ ಅಧಿಕೃತ ಬಿಡುಗಡೆಯ ಪ್ರಕಾರ, ಮಿಶ್ರಿತ ಇಂಧನಕ್ಕಾಗಿ ಭಾರತ ಸರ್ಕಾರದ ಗುರಿಯನ್ನು ಸಾಧಿಸಲು ಮತ್ತು ಭಾರತವನ್ನು ಸ್ವಾವಲಂಬಿಯಾಗಿ ಮಾಡಲು, ರಾಜ್ಯ ಸರ್ಕಾರವು ಎಥೆನಾಲ್ ವಲಯ ತಯಾರಕರನ್ನು ಆಹ್ವಾನಿಸಿದೆ. ಒಟ್ಟು 6 ಸಾವಿರ ಕೋಟಿ ಮೌಲ್ಯದ ಒಪ್ಪಂದಗಳು ರಾಜ್ಯದಲ್ಲಿ ಎಥೆನಾಲ್ ಘಟಕಗಳನ್ನು ಸ್ಥಾಪಿಸಲು ಸಹಿ ಮಾಡಲಾಗಿದೆ.
ಎಥೆನಾಲ್, ವೈದ್ಯಕೀಯ ಸಾಧನಗಳು, ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿ, ಔಷಧಗಳು, ಕಾಗದ ತಯಾರಿಕೆ, ಆಹಾರ ಸಂಸ್ಕರಣೆ, ಆರೋಗ್ಯ ರಕ್ಷಣೆ, ಆಟೋಮೊಬೈಲ್, ಎಲೆಕ್ಟ್ರಾನಿಕ್ಸ್ ತಯಾರಿಕೆ ಮತ್ತು ಕೈಗಾರಿಕಾ ಮೂಲಸೌಕರ್ಯಗಳಂತಹ ವಿವಿಧ ಕ್ಷೇತ್ರಗಳಲ್ಲಿ ಹೂಡಿಕೆ ಮಾಡಲು ಪ್ರಸ್ತಾಪ ಸ್ವೀಕರಿಸಲಾಗಿದೆ ಎಂದು ಹೇಳಿದ್ದಾರೆ.
ಹಿಮಾಚಲ ಪ್ರದೇಶದಲ್ಲಿ ಕೆಲವು ಉದ್ಯಮಿಗಳು ಖಾಸಗಿ ಕೈಗಾರಿಕಾ ಪ್ರದೇಶಗಳು ಮತ್ತು ಥೀಮ್ ಪಾರ್ಕ್ಗಳನ್ನು ಅಭಿವೃದ್ಧಿಪಡಿಸುವ ಆಸಕ್ತಿಯನ್ನು ತೋರಿಸಿದ್ದಾರೆ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.