ಬೆಂಗಳೂರು: ಭೂ ಕಬಳಿಕೆ ಮಾಡುವವರು, ಮರಳು ಕಳ್ಳಸಾಗಾಣಿಕೆದಾರರು ಸೇರಿದಂತೆ ಇನ್ನಿತರ ಅಕ್ರಮ ನಡೆಸುವವರ ಮಾಫಿಯಾಗಳ ಜೊತೆಗೆ ನಂಟು ಇರಿಸಿಕೊಳ್ಳಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಐಪಿಎಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಇಂದು ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ನಡೆದ ಐಪಿಎಸ್ ಅಧಿಕಾರಿಗಳ ಸಮ್ಮೇಳನವನ್ನು ಉದ್ದೇಶಿಸಿ, ಹಿರಿಯ ಅಧಿಕಾರಿಗಳ ಜೊತೆಗೆ ಸಭೆ ನಡೆಸಿ ಮಾತನಾಡಿದ ಅವರು, ಪೊಲೀಸರಿಗೆ ಮಾಫಿಯಾಗಳ ನಂಟು ಇರಿಸಿಕೊಳ್ಳಬಾರದು ಎಂದು ತಿಳಿಸಿದ್ದಾರೆ.
ಸಭೆಯ ಬಳಿಕ ಪತ್ರಕರ್ತರ ಜೊತೆಗೆ ಮಾತನಾಡಿದ ಅವರು, ಭೂ ಮಾಫಿಯಾ, ಮರಳು ಮಾಫಿಯಾ, ಕ್ರಿಮಿನಲ್ ಹಿನ್ನೆಲೆಯನ್ನು ಹೊಂದಿದವರು, ಅವರ ಏಜೆಂಟ್ಗಳು ಸೇರಿದಂತೆ ಯಾವುದೇ ರೀತಿಯ ಮಾಫಿಯಾಗಳ ನಂಟು ಹೊಂದಿದವರ ಜೊತೆ ಪೊಲೀಸರು ನಂಟು ಇರಿಸಿಕೊಳ್ಳದಂತೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ. ಹಾಗೆಯೇ ಸಿವಿಲ್ ವ್ಯಾಜ್ಯಗಳಲ್ಲಿ ಮದ್ಯ ಪ್ರವೇಶಿಸದಂತೆಯೂ ಅವರು ಸೂಚಿಸಿದ್ದಾಗಿ ತಿಳಿಸಿದ್ದಾರೆ.
ಈ ಸಂಬಂಧ ರಾಜ್ಯ ಪೊಲೀಸ್ ಮಹಾನಿರ್ದೇಶಕರು, ಪೊಲೀಸ್ ಕಮಿಷನರ್ಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ನಿರಂತರವಾಗಿ ಪ್ರಕರಣಗಳ ಮೇಲ್ವಿಚಾರಣೆ ನಡೆಸುವಂತೆಯೂ, ಅದಕ್ಕಾಗಿ ಪ್ರತ್ಯೇಕ ಡ್ಯಾಷ್ಬೋರ್ಡ್ಗಳನ್ನು ರಚಿಸುವಂತೆಯೂ ನಿರ್ದೇಶನ ನೀಡಿರುವುದಾಗಿ ಅವರು ಹೇಳಿದ್ದಾರೆ. ಸೈಬರ್ ಅಪರಾಧಗಳು, ಕೃತ್ಯಗಳು ಸೇರಿದಂತೆ ತನಿಖೆಯಲ್ಲಿ ಹೊಸ ಸವಾಲುಗಳನ್ನು ಎದುರಿಸಲು ನೂತನ ವಿಧಾನ ಮತ್ತು ತಂತ್ರಜ್ಞಾನ ಅಳವಡಿಕೆಗೆ ಸಲಹೆ ನೀಡಲಾಗಿದೆ. ಅಪರಾಧ ಪ್ರಕರಣಗಳ ವಿಚಾರಣೆಯಲ್ಲಿ ಹಿನ್ನಡೆಯಾಗದಂತೆಯೂ ಎಚ್ಚರ ವಹಿಸುವಂತೆ ಸೂಚಿಸಿರುವುದಾಗಿಯೂ ಅವರು ಹೇಳಿದ್ದಾರೆ. ಸಾರ್ವಜನಿಕರ ಜೊತೆಗೆ ಸೌಜನ್ಯಯುತವಾಗಿ ವರ್ತಿಸುವಂತೆಯೂ ಪೊಲೀಸರಿಗೆ ನಿರ್ದೇಶನ ನೀಡಲು ಅಧಿಕಾರಿಗಳಿಗೆ ಸೂಚಿಸಿರುವುದಾಗಿಯೂ ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.