ಚೆನ್ನೈ: ತಮಿಳುನಾಡು ಸರ್ಕಾರ ಗಣೇಶ ಮೂರ್ತಿ ತಯಾರಕರಿಗೆ ಹತ್ತು ಸಾವಿರ ರೂ. ಸಹಾಯಧನ ನೀಡುತ್ತಿದ್ದು, ಹಬ್ಬದ ಮುಂಗಡವಾಗಿ 5 ಸಾವಿರ ಮತ್ತು ಹಬ್ಬ ಮುಗಿದ ಬಳಿಕ ಮತ್ತೆ 5 ಸಾವಿರ ರೂ. ಗಳನ್ನು ನೀಡುವುದಾಗಿ ಆದೇಶದಲ್ಲಿ ತಿಳಿಸಿದೆ.
ಕೊರೋನಾ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಈ ಬಾರಿ ಗಣೇಶೋತ್ಸವ ಆಚರಣೆ ನಿಷೇಧಿಸಲಾಗಿದೆ. ಆದರೆ ಇದರಿಂದ ಗಣೇಶನ ಮೂರ್ತಿ ತಯಾರಕರು ಸಂಕಷ್ಟ ಅನುಭವಿಸಬೇಕಾಗಿದ್ದು, ಅದಕ್ಕೆ ಪರಿಹಾರವಾಗಿ 10 ಸಾವಿರ ರೂ. ಪರಿಹಾರವನ್ನು ತಮಿಳು ನಾಡಿನ ಸರ್ಕಾರ ಘೋಷಿಸಿದೆ.
ದೇಶದೆಲ್ಲೆಡೆ ಸೆ. 10 ರಂದು ಗಣೇಶೋತ್ಸವ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ತಮಿಳುನಾಡಿನಲ್ಲಿ ಸೋಂಕು ಹೆಚ್ಚಾಗುವ ಕಾರಣದಿಂದ ಹಲವು ನಿರ್ಬಂಧಗಳನ್ನು ಹೇರಲಾಗಿದೆ. ಕೇವಲ ಮನೆಗಳಲ್ಲಿ ಮಾತ್ರವೇ ಗಣೇಶ ಹಬ್ಬ ಆಚರಣೆ ಮಾಡುವಂತೆಯೂ ಜನರಿಗೆ ಸೂಚಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.